ಬ್ರೇಕಿಂಗ್ ನ್ಯೂಸ್
03-12-22 11:03 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.3 : ವಿವಾದಕ್ಕೊಳಗಾಗಿದ್ದ ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಇಬ್ಬರು ಹಿಂದು ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ದತ್ತಪೀಠಕ್ಕೆ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಮಾಡಿತ್ತು.
ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಸಿಕ್ಕಿದೆ. ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರವಾಸಿಗರಿಗೆ 5 ದಿನಗಳ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರ ವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯ ವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
The State Government has appointed two Hindu priests to the dattapeetha at Bababudangiri, which was embroiled in a controversy. On the recommendation of the governing body, two Hindu priests, Srikanth from Sringeri and Sandeep from Chikkaballapura, have been appointed. Recently, the state government had constituted a governing body for dattapeetha.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 08:28 pm
HK News Desk
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm