ಬ್ರೇಕಿಂಗ್ ನ್ಯೂಸ್
04-12-22 10:25 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.4 : ಸಿದ್ರಾಮುಲ್ಲಾಖಾನ್ ಎಂದೇಳುತ್ತಿದ್ದಂತೆ ಕಾಂಗ್ರೆಸ್ಸಿಗರಿಗೆ ಮೈ ಉರಿ ಹತ್ತಿದೆ. ಹೀಗೆ ಉರಿ ಹತ್ತುತ್ತೆ ಎಂದು ಗೊತ್ತಿದ್ರೆ 10 ವರ್ಷ ಮೊದಲೇ ಹೇಳುತ್ತಿದ್ದೆ. ನೀವು ಪ್ರಧಾನಿಗೆ ಕೊಲೆಗಡುಕ, ನರಹಂತಕ, ರಾವಣ, ಭಸ್ಮಾಸುರ ಎಂದು ಕರೆದ್ರಿ. ಸಿದ್ರಾಮುಲ್ಲಾಖಾನ್ ಅನ್ನೋದು ಬೈಗುಳವಾ...? ಅದು ಬೈಗುಳ ಅಲ್ಲಾ.. ನಿಮ್ಮ ಭಾವನೆಗೆ ಕೊಟ್ಟ ಬಿರುದು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ತನ್ನ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಬಿ.ಎಸ್.ವೈನ ರಾಜಾಹುಲಿ ಅಂತಾರೆ, ಸಿದ್ದುನ ಹುಲಿಯಾ ಅಂದ್ರು... ಇದು ಹಾಗೇ ಒಂದು ಬಿರುದು. ನಾನು ಹಿಂದೂಗಳಿಗೆ ಅನ್ಯಾಯ ಮಾಡಿದ್ದೆ, ಟಿಪ್ಪು ಜಯಂತಿ ಪರ ಇದ್ದೆ ಎಂದು ಕೊಟ್ಟ ಬಿರುದು ಎಂದು ಭಾವಿಸ್ತಾರೆ ಎಂದು ತಿಳಿದಿದ್ದೆ.
ಸಿ.ಟಿ.ರವಿ ಇದನ್ನ ಮುಂದುವರಿಸಿದರೆ ಓಡಾಡುವುದು ಕಷ್ಟವಾಗಬಹುದು ಎಂಬ ಕಾಂಗ್ರೆಸ್ ಮುಖಂಡ ಎಂ.ಬಿ ಪಾಟೀಲ್ ಹೇಳಿಕೆಗೆ ಟಾಂಗ್ ನೀಡಿದ ಸಿಟಿ ರವಿ, ಅವರೇನು ಬೆದರಿಕೆ ಹಾಕ್ತಾರಾ, ಪ್ರಜಾಪ್ರಭುತ್ವದಲ್ಲಿ ಈ ಬೆದರಿಕೆ ನಡೆಯೋಲ್ಲ. ಅವರು ಶ್ರೀಮಂತರೇ ಇರಬಹುದು, ಪಾಳೇಗಾರರೇ ಇರಬಹುದು. ನಾನೊಬ್ಬ ಸಾಮಾನ್ಯ ರೈತನ ಮಗ, ಪಾಳೆಗಾರ ಮನೆತನದವನ್ನಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಂಬೇಡ್ಕರ್ ಕೊಟ್ಟಿದ್ದು ಒಂದೇ ವೋಟ್. ಈ ಪಾಳೇಗಾರಿಕೆ ಮನಸ್ಥಿತಿಯನ್ನು ಎಂ.ಬಿ.ಪಾಟೀಲರು ಬದಲಾಯಿಸಿಕೊಳ್ಳಬೇಕು.
ನೀವು ಮನಸ್ಥಿತಿ ಬದಲಾಯಿಸಿಕೊಳ್ಳದಿದ್ದರೆ ಚಾಲೆಂಜ್ ಸ್ವೀಕರಿಸ್ತೀನಿ, ನಿಮ್ಮೂರಿಗೆ ಬರ್ತೀನಿ. ನಾನು ಏನು ಹೇಳಬೇಕು ಅಂದುಕೊಂಡಿದ್ದೇನೆ ಅದನ್ನ ನಿಮ್ಮೂರಿನಲ್ಲೇ ಹೇಳ್ತೇನೆ, ನಿಮ್ಮ ಮುಖದ ಎದುರೇ ಹೇಳ್ತೇನೆ. ನಿಮ್ಮಷ್ಟು ಶ್ರೀಮಂತಿಗೆ ನನ್ನ ಬಳಿ ಇಲ್ಲ ನನಗೆ ಗೊತ್ತು. ಆದರೆ, ನಿಮ್ಮ ಶ್ರೀಮಂತಿಕೆ ದರ್ಪವನ್ನು ಜನರ ಮೇಲೆ ತೋರಿಸಬೇಡಿ. ನಿಮ್ಮ ಶ್ರೀಮಂತಿಕೆ ದರ್ಪ ಇಲ್ಲಿ ನಡೆಯೋಲ್ಲ. ಕರ್ನಾಟಕ ಯಾರ ಅಪ್ಪನ ಸೊತ್ತೂ ಅಲ್ಲ. ಯಾರಾದರೂ ಫಾದರ್ ಮನೆ ಪ್ರಾಪರ್ಟಿ ಅಂತ ಅನ್ಕೊಂಡಿದ್ರೆ,
ಯಾರ ಫಾದರ್ ಮನೆ ಪ್ರಾಪರ್ಟಿಯೂ ಅಲ್ಲ ಎಂದು ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.
7ನೇ ಶತಮಾನದಿಂದಲೂ ಈ ಮನಸ್ಥಿತಿ ಇದೆ !
Join CFI ಗೋಡೆ ಬರಹದ ಬಗ್ಗೆ ಪ್ರತಿಕ್ರಿಯೆ ನೀಡಿದ ರವಿ, ಪಿ.ಎಫ್.ಐ, ಸಿ.ಎಫ್.ಐ ಬ್ಯಾನ್ ಆಗಿದ್ರೂ ಆ ಮನಸ್ಥಿತಿಯ ಜನ ಇದ್ದಾರೆ. ಇದು ಇಂದು- ನಿನ್ನೆಯಿಂದಲ್ಲ, 7ನೇ
ಶತಮಾನದಿಂದಲೂ ಆ ಮನಸ್ಥಿತಿ ಇದೆ. ಇಸ್ಲಾಮಿಕ್ ಸ್ಟೇಟ್ ಹುಟ್ಟು ಹಾಕಬೇಕೆಂದು ಗಜಾವ ಹಿಂದ್ ಹೆಸರಲ್ಲಿ 7ನೇ ಶತಮಾನದಿಂದ ಶುರುವಾದದ್ದು. ಆ ಮನಸ್ಥಿತಿಯ ಜನ ಇದ್ದಾರೆ, ಆ ಮನಸ್ಥಿತಿಯ ಕಾರಣಕ್ಕೆ ಜಿನ್ನಾ ಭಾರತದ ವಿಭಜನೆಗೆ ಕೈಹಾಕಿದ್ದು. ಆ ಮನಸ್ಥಿತಿಯ ಜನ ಇರುವ ವರೆಗೂ ಈ ರೀತಿ ಮಾಡ್ತಾ ಇರ್ತಾರೆ. ವೋಟಿನ ಆಸೆಗೆ ಜೊಲ್ಲು ಸುರಿಸಿಕೊಂಡು ತನ್ನದೇ ಶಾಸಕನ ಮನೆಗೆ ಬೆಂಕಿ ಹಾಕಿದ್ರು. ಆಗ ಅವ್ರು ಅಮಾಯಕರು ಅಂತ ಸರ್ಟಿಫಿಕೇಟ್ ಕೊಡೋರಿಗೆ ಮತ ಹಾಕಿದರೆ ಅವ್ರೂ ಉಳಿಯಲ್ಲ ದೇಶವೂ ಉಳಿಯಲ್ಲ ಎಂದು ಹೇಳಿದರು.
'Sidramulla Khan (Siddaramaiah) is all the rage for the Congress. That word is not an excuse, it can be considered a title given to your feelings,' CT Ravi defended. Talking to the reporters on Sunday, he said, 'If the Congressmen would have known that they would get so fired up, they would have said this 10 years earlier. Yediyurappa called him 'Rajahuli', Siddaramaiah as 'Hulia'. Also, it could have been thought of as a title', he asserted.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm