ಬ್ರೇಕಿಂಗ್ ನ್ಯೂಸ್
07-12-22 10:06 pm HK News Desk ಕರ್ನಾಟಕ
ಕೋಲಾರ, ಡಿ.7 : ಕುಟುಂಬ ಕಲಹದಿಂದ ಮನನೊಂದ ರಾಕ್ಷಸ ತಾಯಿಯೊಬ್ಬಳು ಇಬ್ಬರು ಹೆಣ್ಣು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಹೃದಯ ವಿದ್ರಾವಕ ಘಟನೆ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಘಟನೆಯಲ್ಲಿ 8 ವರ್ಷದ ಪುತ್ರಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಮಗಳು ಸಾವು ಬದುಕಿನಲ್ಲಿ ನರಳಾಡುತ್ತಿದ್ದಾಳೆ.
ಆಂಧ್ರಪ್ರದೇಶ ಮೂಲದ ಜ್ಯೋತಿ ಎಂಬಾಕೆ ಮಕ್ಕಳನ್ನು ಸುಟ್ಟ ತಾಯಿ. ಪಲಮನೇರು ಎಂಬಲ್ಲಿನ ನಿವಾಸಿ ಜ್ಯೋತಿ ಅದೇ ಗ್ರಾಮದ ತಿರುಮಲೇಶ ಎಂಬಾತನನ್ನ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದಳು. ಕೆಲವು ದಿನಗಳ ಕಾಲ ಚೆನ್ನಾಗಿದ್ದ ದಂಪತಿ ಆ ಬಳಿಕ ಜಗಳ ಮಾಡಲಾಂಭಿಸಿದ್ದರು. ಈ ನಡುವೆ, ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಳು. ಕುಟುಂಬ ಕಲಹದ ಜಂಜಾಟದಿಂದ ಬೇಸತ್ತು ನಿನ್ನೆ ಮಕ್ಕಳೊಂದಿಗೆ ಮನೆಬಿಟ್ಟು ಬಂದಿದ್ದ ಜ್ಯೋತಿ, ಆತ್ಮಹತ್ಯೆಗೆ ನಿರ್ಧರಿಸಿದ್ದಳು.


ಇದಕ್ಕಾಗಿ 10 ಲೀಟರ್ ಪೆಟ್ರೋಲ್ ತೆಗೆದುಕೊಂಡು ಕೋಲಾರದ ಅಂಜನಾದ್ರಿ ಬೆಟ್ಟಕ್ಕೆ ಬಂದಿದ್ದು ರಾತ್ರಿಯಿಡೀ ಬೆಟ್ಟದ ತಪ್ಪಲಿನ ಬಂಡೆಯ ಮೇಲೆ ಮಲಗಿದ್ದಳು. ನಿದ್ರೆಯಲ್ಲಿದ್ದ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದ, ಬಳಿಕ ಬೆಂಕಿ ಹಚ್ಚಿದ್ದಾಳೆ. ಇದರಿಂದ 8 ವರ್ಷದ ಅಕ್ಷಯಾ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟರೆ, 6 ವರ್ಷದ ಉದಯಶ್ರೀ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಉದಯಶ್ರೀಯನ್ನು ಜಾಲಪ್ಪ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬುಧವಾರ ಬೆಳಗ್ಗೆ ಬೆಟ್ಟಕ್ಕೆ ವಿಹಾರಕ್ಕೆಂದು ಬಂದವರು ಮಕ್ಕಳನ್ನು ಸುಟ್ಟಿದ್ದನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ.
A woman attempted suicide after setting her two children on fire after dousing them in petrol at Anjanadri Hill in Mulbagal town in the district on Tuesday. While one of the children died, the other sustained burn injuries and is undergoing treatment in the critical care unit at the Mulbagal government hospital.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm