ಬ್ರೇಕಿಂಗ್ ನ್ಯೂಸ್
08-12-22 06:28 pm HK News Desk ಕರ್ನಾಟಕ
ಕಲಬುರ್ಗಿ, ಡಿಸೆಂಬರ್ 8: ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕ ರಾಜ್ಯದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಜರಾತ್ನಲ್ಲಿ ವಿರೋಧ ಪಕ್ಷಗಳು ಎನ್ನುವಂಥದ್ದು ಕಳೆದ ಐದು ವರ್ಷಗಳಿಂದ ಇರಲಿಲ್ಲ. ಆದ್ದರಿಂದ ಗುಜರಾತ್ ಫಲಿತಾಂಶ ಏನಾಗಲಿದೆ ಎಂಬುದು ಮೊದಲೇ ಎಲ್ಲರಿಗೊ ಗೊತ್ತಿರುವ ವಿಷಯವಾಗಿತ್ತು. ರಾಜ್ಯದ ಮುಖ್ಯಮಂತ್ರಿಗಳು ಗುಜರಾತ್ ಫಲಿತಾಂಶ ರಾಜ್ಯಕ್ಕೂ ತಟ್ಟುತ್ತದೆ ಅಂದಿದ್ದಾರೆ. ಆದರೆ ಗುಜರಾತ್ನಲ್ಲಿರುವ ವಾತವಾರಣವೇ ಬೇರೆ, ರಾಜ್ಯದ ವಾತಾವರಣವೇ ಬೇರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ರಾಜ್ಯ ಸರ್ಕಾರದ ಕರ್ಮಕಾಂಡಗಳು ತಿಳಿದಿದೆಯಲ್ಲವೇ? ಇದರಿಂದ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ. ಹಾಗಾಗಿ ಗುಜರಾತ್ನ ಫಲಿತಾಂಶ ರಾಜ್ಯದಲ್ಲಿ ಕನಸು ಕಂಡರೆ ಕನ್ನಡಿಗರು ಅದಕ್ಕೆ ಮಾರು ಹೋಗೋವವರಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ಟೀಕಿಸಿದರು.
ಗುಜರಾತಿನ ಫಲಿತಾಂಶ ಅಚ್ಚರಿ ಮೂಡಿಸುವ ಫಲಿತಾಂಶ ಅಲ್ಲ.ಚುನಾವಣೆ ಪೂರ್ವದಲ್ಲೆ ಅಲ್ಲಿ ವಿಪಕ್ಷಗಳ ಸ್ಟ್ರೆಂತ್ ಕುಂಠಿತವಾಗಿದೆ. ಗುಜರಾತ್ನಲ್ಲಿ ವಿಪಕ್ಷಗಳು ಇಲ್ಲದ ಕಾರಣ ಜನತೆ ತೀರ್ಮಾನ ಕೈಗೊಂಡಿದ್ದಾರೆ. ಗುಜರಾತ್ ಫಲಿತಾಂಶ ಇಟ್ಕೊಂಡು ಇವರು ಓಟ್ ಹೇಗೆ ಕೇಳ್ತಾರೆ, ಇವರು ರಾಜ್ಯದಲ್ಲಿ ಏನ್ ಕೆಲಸ ಮಾಡಿದಾರೆ ಅಂತಾ ಗುಜರಾತ್ ಹೆಸರು ಹೇಳಿ ಓಟ್ ಕೇಳ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದು ಬಿಜೆಪಿ ಮಕಾಡೆ ಮಲಗಿದೆ, ಮಕಾಡೆ ಮಲಗೋದು ಎದ್ದೇಳೋದು ಆ ಪಕ್ಷಗಳ ಸಂಘಟನೆ ಮೇಲೆ ಹೋಗುತ್ತೆ. ಗುಜರಾತ್ ಚುನಾವಣೆ ಫಲಿತಾಂಶದಿಂದ ಯಾವುದೇ ಪರಿಣಾಮ ಬಿರಲ್ಲ. ಗುಜರಾತ್ ಫಲಿತಾಂಶ ಬೀರುತ್ತೆ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಸರಿಯಲ್ಲ ಅಖಾಡಕ್ಕೆ ಇಳಿದಾಗ ಯಾರೆನು ಅನ್ನೊದು ತಿಳಿಯಲಿದೆ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಬದಲಾವಣೆ ಆಗ್ತಾರೋ ಅವರೆ ಮುಂದುವರಿತಾರೋ ನನಗೆಕೆ ಬೇಕಾ? ಅದು ಅವರ ಪಕ್ಷದ ಆಂತರಿಕ ವಿಚಾರ. ಜೆಡಿಎಸ್ ಬಗ್ಗೆ ಮಾತಾನಾಡೋಕೆ ಕಾಂಗ್ರೆಸ್, ಬಿಜೆಪಿಗೆ ನೈತಿಕ ಹಕ್ಕಿಲ್ಲ ಎಂದರು.
Former Chief Minister HDK has commented on Gujarat and Himachal Pradesh election results. Speaking to the media where Devanahalli Venugopalaswamy had darshan, he said that he did not know about the result of Gujarat in advance, he said that there is no need to make a special interpretation regarding the election there.There was no such thing as opposition parties in Gujarat for the last five years. So what will happen in Gujarat is a matter that is already known to everyone.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am