ಬ್ರೇಕಿಂಗ್ ನ್ಯೂಸ್
08-12-22 07:47 pm HK News Desk ಕರ್ನಾಟಕ
ಮೈಸೂರು, ಡಿ.8 : ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿಯವರೇ ಫಂಡ್ ಮಾಡಿದ್ದಾರೆ. ಕಾಂಗ್ರೆಸ್ ಮತ ವಿಭಜನೆಗಾಗಿ ಆಪ್ ಪಕ್ಷಕ್ಕೆ ಬಿಜೆಪಿ ಫಂಡ್ ಮಾಡಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಗುಜರಾತ್ ನಲ್ಲಿ ಬಿಜೆಪಿ ಬರುತ್ತೆ ಅಂತ ನಿರೀಕ್ಷೆ ಇತ್ತು. ಆದರೆ ಇಷ್ಟೊಂದು ಲೀಡ್ ಬರುವುದಕ್ಕೆ ಆಪ್ ಸ್ಪರ್ಧೆ ಕಾರಣ. ಆಪ್ ಪಡೆದ ಮತಗಳೆಲ್ಲಾ ಕಾಂಗ್ರೆಸ್ ನದ್ದು. ಆದರೆ ಒಂದು ರಾಜ್ಯದ ಚುನಾವಣಾ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀಸಲ್ಲ. ಅಲ್ಲಿನ ರಿಸಲ್ಟ್ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಇಲ್ಲಿಯ ಬಿಜೆಪಿ ಸರಕಾರ ಅತಿ ಭ್ರಷ್ಟ ಸರಕಾರ. ಕಾಂಗ್ರೆಸ್ ಸಂಘಟನೆ ಇಲ್ಲಿ ಶಕ್ತಿಯುತವಾಗಿದೆ. ಗುಜರಾತ್ ಅನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಬೇಡಿ. ಕರ್ನಾಟಕ ಬಿಜೆಪಿಗೆ ತಾವು ಸೋಲುತ್ತೇವೆ ಎಂಬುದು ಗೊತ್ತಿದೆ. ಹಾಗಾಗಿ ಜೆಡಿಎಸ್ ಜೊತೆ ಸೇರಿ ಇಲ್ಲಿಯೂ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ ಅದು ಇಲ್ಲಿ ನಡೆಯಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್ ನಲ್ಲಿ 40% ಸರಕಾರ ಇತ್ತು ಅಂತಾ ಯಾರಾದರೂ ಹೇಳಿದ್ರಾ? ಕರ್ನಾಟಕದ್ದು ಹೇಳಿದ್ರಾ? ಅಷ್ಟು ದುಡ್ಡು ಖರ್ಚು ಮಾಡಿದರೂ ಆಪ್ 6 ಸ್ಥಾನ ಪಡೆದಿದೆ. ಮತ ವಿಭಜನೆ ಆಗಿದ್ದು ಅವರಿಂದ ಅಷ್ಟೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರೂ ಗೆಲ್ಲುತ್ತೆ. ನಾವು ಏನೂ ತಂತ್ರಗಾರಿಕೆ ಮಾಡುವುದೇ ಬೇಡ ಎಂದು ಹೇಳಿದ ಸಿದ್ದರಾಮಯ್ಯ, ಮೋದಿ ಹವಾ ಎಲ್ಲಿಯೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಯಾಕೆ ಸೋಲ್ತಿದ್ದರು. ಎಲ್ಲಿ ಹೋಯ್ತು ಮೋದಿ ಹವಾ ಎಂದು ಕೇಳಿದರು.
ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕೇಳಿದ್ದಕ್ಕೆ, ಈ ಬಗ್ಗೆ ಮಹಾರಾಷ್ಟ್ರದವರಿಗೆ ಪ್ರಧಾನಿಯಿಂದ ಬುದ್ದಿ ಹೇಳಿಸುವ ಧೈರ್ಯವೂ ಕರ್ನಾಟಕ ಬಿಜೆಪಿಗೆ ಇಲ್ಲ. ಕರ್ನಾಟಕ ಬಿಜೆಪಿಯವರು ಹೇಡಿಗಳು. ಎರಡು ಕಡೆ ಬಿಜೆಪಿ ಸರಕಾರ ಇದ್ದರೂ ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ.?
ಇಬ್ಬರು ಮಾತಾಡಿಸಿಕೊಂಡೇ ಪುಂಡಾಟಿಕೆ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗುವಂತೆ ಮಾಡುತ್ತಿದ್ದಾರಾ? ಗಡಿ ವಿವಾದದ ಬಗ್ಗೆ ಒಳ್ಳೆ ಲಾಯರ್ ಇಟ್ಟು ವಾದ ಮಾಡಿಸಬೇಕು. ಸಿಎಂ, ಪ್ರಧಾನಿಗಳ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಪರಿಸ್ಥಿತಿ ನಿಯಂತ್ರಿಸಬೇಕು. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ನಮ್ಮದ್ದು. ಒಂದಿಂಚೂ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದರು ಸಿದ್ದರಾಮಯ್ಯ.
Former Karnataka Chief Minister Siddaramaiah on Thursday alleged the BJP funded the Aam Aadmi Party (AAP) in Gujarat to divide the Congress votes. As the saffron party is set to return to power for the seventh time in a row, the Congress stalwart in Karnataka said the fledgling party splurged huge money in the Gujarat elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm