ಬ್ರೇಕಿಂಗ್ ನ್ಯೂಸ್
09-12-22 07:39 pm HK News Desk ಕರ್ನಾಟಕ
ಹಾಸನ, ಡಿ.9 : ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹಾಲಿ ಶಾಸಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಅವರು ಸಿಎಲ್ಪಿ ನಾಯಕರಾಗಿದ್ದು ಕೆಪಿಸಿಸಿ ಅಧ್ಯಕ್ಷರ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಯಾರು ಬರುತ್ತಾರೆಂದು ಅವರಿಗೆ ಗೊತ್ತಿದೆ. ಯಾರು ಸಂಪರ್ಕದಲ್ಲಿದ್ದಾರೆ ಎಂಬುದು ನನ್ನ ಗಮನಕ್ಕೂ ಇದೆ. ಆದರೆ ಯಾರೆಂದು ಈಗಲೇ ಹೇಳುವುದಿಲ್ಲ ಎಂದವರು ಹೇಳಿದ್ದಾರೆ.

![]()

ಎಚ್.ವಿಶ್ವನಾಥ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಸೇರುವ ಇಚ್ಛೆ ಇದೆ ಅವರಿಗೆ. ಈಗ ಅವರ ಮನಸ್ಸು ಪರಿವರ್ತನೆ ಆಗಿದೆ. ಹಾಗಾಗಿ ಮರಳಿ ಮನೆಗೆ ಬರಲಿಕ್ಕೆ ಸಿದ್ದರಾಗಿದ್ದಾರೆ. ನನ್ನ ಹತ್ರ ಮಾತನಾಡಿದ್ದಾರೆ, ನಾನು ಮರಳಿ ಮನೆಗೆ ಬನ್ನಿ ಎಂದು ಮನವಿ ಮಾಡಿದ್ದೇನೆ ಎಂದು ಧ್ರುವ ನಾರಾಯಣ್ ಹೇಳಿದ್ದಾರೆ.

ತೇಜೋವಧೆ, ದಿಕ್ಕು ತಪ್ಪಿಸುವುದೇ ಕೆಲಸ
ಕಾಂಗ್ರೆಸ್ ನಾಯಕರಿಗೆ ಪಾಕಿಸ್ತಾನದ ಹುಚ್ಚುನಾಯಿ ಕಚ್ಚಿದೆ ಎಂಬ ಸಿ.ಟಿ.ರವಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಬಿಜೆಪಿಯವರು ಯಾವುದೇ ಭಾಷಣದಲ್ಲಿ ಅಭಿವೃದ್ಧಿ ಬಗ್ಗೆ ಹೇಳುವುದೇ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತೇಜೋವಧೆ ಮಾಡುವುದು ಬಿಟ್ಟರೆ ಬೇರೆ ಏನು ಅಭ್ಯಾಸವೇ ಇಲ್ಲ. ಬರೀ ಇಂತಹದ್ದೆ ಕೆಲಸಕ್ಕೆ ಬಾರದ ಮಾತುಗಳನ್ನು ಆಡಿ ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬೇರೆ ವಿಷಯಗಳೇ ಇಲ್ಲ. ಚುನಾವಣೆ ಬಂದಾಗ ಪಾಕಿಸ್ತಾನ ಇನ್ನೊಂದು ಬರುತ್ತೆ.. ಬರೀ ಹಾನಿ ಮಾಡುವ ಕೆಲಸ ಮಾಡುತ್ತಾರೆ.
ಆಡಳಿತ ಪಕ್ಷದಲ್ಲಿದ್ದವರು ಇಂತಹ ಕಾರ್ಯಕ್ರಮ ಕೊಟ್ಟಿದ್ದೇವೆ ಅಂತ ಹೇಳಬೇಕು. ಪ್ರಣಾಳಿಕೆಯಲ್ಲಿ 600 ಭರವಸೆ ಕೊಟ್ಟಿದ್ರು, 60 ಭರವಸೆ ಈಡೇರಿಲ್ಲ. ಯಾರಾದ್ರು ಪ್ರಶ್ನೆ ಮಾಡ್ತಾರಾ, ನಮ್ಮ ಸರ್ಕಾರ ಇದ್ದಾಗ 165 ಭರವಸೆ ಕೊಟ್ಟಿದ್ದು ಈಡೇರಿಸಿದ್ದೇವೆ. ಅದಕ್ಕಾಗಿ ಇವರು ಚುನಾವಣೆ ಬಂದಾಗ ಪಾಕಿಸ್ತಾನ ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರ ನಡುವೆ ಭಿನ್ನಾಭಿಪ್ರಾಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಅವರದ್ದು ಎಲ್ಲದಕ್ಕೂ ಪಲಾಯನವಾದ ಎಂದು ಮೂದಲಿಸಿದರು.
Dhruvanarayan says Hassan MLA to join Congress very soon in touch with DK Shivakumar.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm