ಬ್ರೇಕಿಂಗ್ ನ್ಯೂಸ್
11-12-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.11 : ಚಂಡಮಾರುತದ ಪರಿಣಾಮ ದಿಢೀರ್ ತಾಪಮಾನದ ಕುಸಿತ ಮತ್ತು ವಾತಾವರಣದಲ್ಲಿ ತೇವಾಂಶದ ಹೆಚ್ಚಳ ಉಸಿರಾಟದ ಮೇಲೆ ತೀವ್ರ ಪರಿಣಾಮ ಬೀರಬಹುದು. ಉಸಿರು ಕಟ್ಟುವುದು, ಶೀತ ಹಾಗೂ ಗಂಟಲು ನೋವು ಕಾಣಿಸಿಕೊಳ್ಳಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಮಾಂಡೋಸ್ ಚಂಡಮಾರುತದ ಕಾರಣ ಡಿಸೆಂಬರ್ 14ರ ವರೆಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮನೆಯಲ್ಲಿ ಕ್ರಾಸ್ ವೆಂಟಿಲೇಷನ್ ಮುಖ್ಯ, ಮನೆಯ ಎಲ್ಲಾ ಕಿಟಕಿಗಳನ್ನು ಮುಚ್ಚಿದಾಗ ಗಾಳಿಗೆ ಯಾವುದೇ ಮಾರ್ಗವಿರುವುದಿಲ್ಲ. ಯಾರಾದರೂ ಮನೆಯಲ್ಲಿ ಸೀನುತ್ತಿದ್ದರೆ, ಉಳಿದವರಿಗೂ ಕೂಡ ಸೋಂಕು ತಗುಲಿ, ಶೀತ, ಜ್ವರ ಮತ್ತಿತರೆ ಆರೋಗ್ಯ ಸಮಸ್ಯೆ ಕಾಡುವ ಸಾಧ್ಯತೆ ಇರುತ್ತದೆ ಎಂದು ಮಕ್ಕಳ ತಜ್ಞ ಡಾ. ಎಚ್ ಪರಮೇಶ್ ಅವರು ಡೆಕ್ಕನ್ ಹೆರಾಲ್ಡ್ ಗೆ ತಿಳಿಸಿದ್ದಾರೆ.
ಕ್ರಾಸ್ ವೆಂಟಿಲೇಷನ್ ಕೊರತೆ ಕುಟುಂಬ ಸದಸ್ಯರಲ್ಲಿ ವೇಗವಾಗಿ ಸೋಂಕು ಹರಡಲು ಕಾರಣವಾಗುತ್ತದೆ. ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಮೂಗನ್ನು ಮುಚ್ಚಿಕೊಳ್ಳಿ, ಮೇಲಾಗಿ ಹತ್ತಿ ಅಥವಾ ಕರವಸ್ತ್ರವನ್ನು ಬಳಸಿ ಮತ್ತು ನಂತರ ನಿಮ್ಮ ಕೈಗಳನ್ನು ತೊಳೆಯಿರಿ. ನಿಮ್ಮ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಿ, ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಬಳಪಡಿಸಲು ಹಣ್ಣುಗಳು, ತರಕಾರಿಗಳು ಬಹಳ ಮುಖ್ಯ. ಏಕೆಂದರೆ ಅವುಗಳು ಬಹಳಷ್ಟು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಶೀತ ವಾತಾವರಣದಲ್ಲಿ ಆವಿಯಲ್ಲಿ ಬೇಯಿಸಿದ ಆಹಾರವನ್ನು ತಿನ್ನುವುದು ಸೂಕ್ತ. ವೈರಲ್ ಜ್ವರ ಕಾಲಾನಂತರದಲ್ಲಿ ಹೆಚ್ಚುತ್ತಿದೆ, ಇದನ್ನು ಕಡಿಮೆ ಮಾಡಲು ಮನೆಯಲ್ಲಿಯೇ ತಯಾರಿಸಿದ ಆಹಾರಗಳ ಕಡೆ ಹೆಚ್ಚು ಗಮನಕೊಡಿ. ಫ್ರಿಜ್ನಲ್ಲಿರಿಸಿರುವ ಆಹಾರವನ್ನು ಸೇವಿಸುವ ಮೊದಲು ಸ್ವಲ್ಪ ಹೊತ್ತು ಹೊರಗೆ ತೆಗೆದಿಡಿ, ಇದು ನಿಮ್ಮ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಸೀನುವಾಗ ಅಥವಾ ಜ್ವರ ಇರುವವರಿಂದ ಸ್ವಲ್ಪ ದೂರವಿರಿ. ಆರ್ದ್ರ ವಾತಾವರಣದಲ್ಲಿ ಸುಲಭವಾಗಿ ಸೋಂಕು ಮತ್ತೊಬ್ಬರಿಗೆ ತಗುಲುತ್ತದೆ. ರೋಗಾಣುಗಳು ಹರಡುವುದನ್ನು ತಡೆಯಲು ಮಾಸ್ಕ್ ಬಳಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
With the mercury hovering low and cyclonic weather prevailing, the city is under the grip of flu-like illnesses, including viral influenza and respiratory tract infections. This, even as the onslaught of dengue and other vector-borne diseases continues.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm