ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm