ಬ್ರೇಕಿಂಗ್ ನ್ಯೂಸ್
12-12-22 01:30 pm HK News Desk ಕರ್ನಾಟಕ
ಹಾಸನ, ಡಿ.12: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಎಂಬಲ್ಲಿ ಸ್ವಿಫ್ಟ್ ಹಾಗೂ ಇನೋವಾ ಕಾರು ಮಧ್ಯೆ ಭೀಕರ ಅಪಘಾತ ನಡೆದಿದ್ದು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದಿಂದ ಬೆಂಗಳೂರಿಗೆ ಮದುವೆಗೆ ತೆರಳಿ ಬರುತ್ತಿದ್ದ ದಂಪತಿ ಸೇರಿ ಮೂವರು ಸಾವು ಕಂಡಿದ್ದಾರೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಹತ್ತು ಗಂಟೆ ವೇಳೆಗೆ ಅಪಘಾತ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಇನ್ನೊವಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದಿದೆ. ಇನೋವಾ ಕಾರಿನಲ್ಲಿದ್ದ ಹಾಸನ ಮೂಲದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನೋವಾ ಕಾರಿನಲ್ಲಿದ್ದ ಹಾಸನ ನಗರದ ದೊಡ್ಡಿ ರಸ್ತೆಯ ಶ್ರೀನಿವಾಸಮೂರ್ತಿ(66), ಜಯಂತಿ (60) ದಂಪತಿ ಹಾಗು ಸಂಬಂಧಿ ಕಾರು ಚಲಾಯಿಸುತ್ತಿದ್ದ ಪ್ರಭಾಕರ್ ಎಂಬವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಸಂಬಂಧ ಬಾಡಿಗೆ ಕಾರಿನಲ್ಲಿ ತೆರಳಿದ್ದ ಕುಟುಂಬ ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮದುವೆ ಮುಗಿಸಿ ವಾಪಸ್ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾಗಿದ್ದ ಇನ್ನೋವಾ ಕಾರು, ಆನಂತರ ಎದುರಿನಿಂದ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ.
ಭೀಕರ ಅಪಘಾತದಲ್ಲಿ ಇನ್ನೋವಾದಲ್ಲಿದ್ದ ಮೂವರು ಹಾಗೂ ಸ್ವಿಫ್ಟ್ ಕಾರಿನಲ್ಲಿದ್ದ ಕಿಶೋರ್ ಮತ್ತು ಇನ್ನೊಬ್ಬರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ಎರಡೂ ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
Five people have been killed and three seriously injured in a head-on collision between two cars on Bengaluru-Mangaluru national highway, near Nagathihalli, in Nagamangala taluk, on Sunday night. Three passengers in the Swift car, from Hassan and two passengers in the Innova car were killed on the spot in the mishap, according to police.
07-02-25 04:22 pm
Bangalore Correspondent
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 03:12 pm
Mangalore Correspondent
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm