ಕಾಂಗ್ರೆಸ್ ಸೇರಲಿರುವ ಬಿಜೆಪಿ ಎಂಎಲ್ಸಿ ಸಂದೇಶ್ ನಾಗರಾಜ್ ; 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಬಿಡಲಿದ್ದಾರೆಂದು ಕಿಡಿನುಡಿ ! 

12-12-22 07:11 pm       HK News Desk   ಕರ್ನಾಟಕ

ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ.

ಮೈಸೂರು, ಡಿ.12 : ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಇದಲ್ಲದೆ, ಚುನಾವಣೆ ವೇಳೆಗೆ ಬಿಜೆಪಿಯಿಂದ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ. ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಂಬರ್ ವನ್ ಆಗಿದ್ದಾರೆ. ನನಗೆ ಬಿಜೆಪಿ ಸಹವಾಸ ಸಾಕಾಗಿದೆ. ಹೆಚ್. ವಿಶ್ವನಾಥ್ ಅವರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪನವರಿಗೂ ಅನ್ಯಾಯ ಮಾಡಿದ್ದಾರೆ. ವಿಜಯೇಂದ್ರನನ್ನು ವರುಣಾ ಕ್ಷೇತ್ರಕ್ಕೆ ಕರೆತಂದು ಅವರನ್ನೂ ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದಾರೆ. ವಿಜಯೇಂದ್ರ ರಾಜಕೀಯ ಭವಿಷ್ಯಕ್ಕಾಗಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

ನಾನು ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯನಾಗಿದ್ದರೂ ಬಿಜೆಪಿ ಸರಕಾರ ಬರಲು ಸಹಾಯ ಮಾಡಿದೆ. ಆದರೆ ನನಗೆ ಬಿಜೆಪಿಯವರು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪನವರಿಗೆ ಅನ್ಯಾಯ ಮಾಡಿದ ಬಿಜೆಪಿಯವರಿಗೆ 40 ಸ್ಥಾನ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಸೇರುವ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಜೊತೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

As the preparations for the assembly elections have started, defection activities have also intensified. Another wicket fell for the BJP in Mysore, with Vidhan Parishad member Sandesh Nagaraj all set to join the Congress. He has also stated that more than 10 MLAs from BJP will join Congress.