ಬ್ರೇಕಿಂಗ್ ನ್ಯೂಸ್
12-12-22 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12 : ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಖಚಿತ ಪಡಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ 5 ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿದೆ. ಬಾಲಕಿ ಮೇಲೆ ನಿಗಾ ವಹಿಸಿದ್ದೇವೆ. ರಾಯಚೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಝೀಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಸೋಂಕಿನ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಆರೋಗ್ಯಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಡಾ.ಕೆ.ಸುಧಾಕರ್, ಪುಣೆ ವೈರಾಲಜಿ ಲ್ಯಾಬ್ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ ಎಂದಿದ್ದಾರೆ.
ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದ ಬಾಲಕಿಗೆ ನ.13ರಂದು ಮೊದಲು ಜ್ವರ ಕಾಣಿಸಿಕೊಂಡಿತ್ತು. ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿತ್ತು. ವಿಜಯನಗರದ ವಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಸ್ಯಾಂಪಲ್ ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್ಗೆ ಕಳಿಸಿದ್ದರು. ಡಿಸೆಂಬರ್ 9ರಂದು ಬಾಲಕಿಗೆ ಝೀಕಾ ಸೋಂಕು ಇರುವುದು ಪತ್ತೆಯಾಗಿದೆ. ಬಾಲಕಿ ಕುಟುಂಬಸ್ಥರ ರಕ್ತ ಹಾಗೂ ಯೂರಿನ್ ಸ್ಯಾಂಪಲ್ ಸಂಗ್ರಹಿಸಲಾಗಿದ್ದು ಐದು ಜನರ ಸ್ಯಾಂಪಲ್ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Karnataka Health Minister Dr K Sudhakar on Monday confirmed the first Zika virus case in Karnataka. The minister said that a 5-year-old girl from Raichur has tested positive for the virus. Sudhakar said that the girl is being closely being monitored by a team of doctors. Officials said that the girl was suffering from vomiting and a fever for the past 2 weeks. Initially, she was treated at Taluk hospital in Sindhanur, and was later shifted to Vijayanagara Institute of Medical Sciences.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm