ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm