ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am