ಬ್ರೇಕಿಂಗ್ ನ್ಯೂಸ್
16-12-22 02:29 pm HK News Desk ಕರ್ನಾಟಕ
ದಾವಣಗೆರೆ, ಡಿ.16: ಚಾರ್ಜ್ ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡು ವಿದ್ಯುತ್ ಶಾರ್ಟ್ ಸರ್ಕಿಟ್ ಉಂಟಾಗಿ ದಾವಣಗೆರೆ ಮೂಲದ ಎಂಟೆಕ್ ವಿದ್ಯಾರ್ಥಿಯೊಬ್ಬ ಜರ್ಮನಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ದಾವಣಗೆರೆಯ ಸರಸ್ವತಿ ನಗರ ಬಡಾವಣೆಯ ನಿವಾಸಿಗಳಾದ ಶಿಕ್ಷಕ ದಂಪತಿ ಇಂದಿರಮ್ಮ ಮತ್ತು ಕೆ.ರೇವಪ್ಪ ಅವರ ಪುತ್ರ ಸಂತೋಷ್ ಕುಮಾರ್ (30) ಮೃತ ವಿದ್ಯಾರ್ಥಿ. ಉನ್ನತ ವ್ಯಾಸಂಗಕ್ಕೆಂದು ಜರ್ಮನಿಗೆ ತೆರಳಿದ್ದ ಸಂತೋಷ್ ಅಲ್ಲಿನ ಕೆಮ್ ನಿಟ್ಸ್ ವಿಶ್ವವಿದ್ಯಾನಿಲಯದಲ್ಲಿ ಎಂಎಸ್ ವ್ಯಾಸಂಗ ನಡೆಸುತ್ತಿದ್ದರು.
ಜರ್ಮನಿಯ ಕೆಮ್ ನಿಟ್ಸ್ ನಗರದಲ್ಲಿ ಪಿಜಿಯಲ್ಲಿ ಇದ್ದುಕೊಂಡು ಓದುತ್ತಿದ್ದ ಸಂತೋಷ್ ಕುಮಾರ್ ನ.30ರಂದು ಮೃತಪಟ್ಟಿದ್ದಾರೆ. ತನ್ನ ಪಿಜಿಯಲ್ಲಿ ರಾತ್ರಿ ವೇಳೆ ಮೊಬೈಲನ್ನು ಚಾರ್ಜ್ ಇಟ್ಟು ನಿದ್ದೆ ಮಾಡಿದ್ದರು. ಈ ವೇಳೆ, ಮೊಬೈಲ್ ಸ್ಫೋಟಗೊಂಡಿದ್ದು ಶಾರ್ಟ್ ಸರ್ಕಿಟ್ ಉಂಟಾಗಿ ಹೊಗೆ ಹೊತ್ತಿಕೊಂಡಿತ್ತು. ಜರ್ಮನಿಯಲ್ಲಿ ತೀವ್ರ ಚಳಿ ಇರುವುದರಿಂದ ಕಿಟಕಿ, ಬಾಗಿಲು ಮುಚ್ಚಿ ನಿದ್ದೆ ಮಾಡುತ್ತಿದ್ದರು. ನಿದ್ದೆಯ ಸಂದರ್ಭದಲ್ಲಿ ಹೊಗೆ ಆವರಿಸಿಕೊಂಡು ಉಸಿರು ಕಟ್ಟಿ ಸಾವು ಸಂಭವಿಸಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾಗಿ ಸಂತೋಷ್ ಸಂಬಂಧಿಕರು ಮಾಹಿತಿ ನೀಡಿದ್ದಾರೆ.
ನ.30ರಂದು ರಾತ್ರಿ ಘಟನೆ ಸಂಭವಿಸಿದೆ. ಮರುದಿನ ಕರೆ ಸ್ವೀಕರಿಸದೇ ಇದ್ದುದರಿಂದ ಸ್ನೇಹಿತರ ಮೂಲಕ ಸಂಪರ್ಕಿಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ. ಎಂಟೆಕ್ ಓದಿದ್ದ ಸಂತೋಷ್ ಕುಮಾರ್ ಬೆಂಗಳೂರಿನಲ್ಲಿ ಎರಡು ವರ್ಷ ಕೆಲಸ ಮಾಡಿದ್ದರು. ಆನಂತರ, ಉನ್ನತ ವ್ಯಾಸಂಗಕ್ಕೆಂದು 2017ರಲ್ಲಿ ಜರ್ಮನಿ ತೆರಳಿದ್ದರು. ಶಿಕ್ಷಕರಾಗಿರುವ ರೇವಪ್ಪ ದಂಪತಿಯ ಮೊದಲ ಮಗ ಶ್ರೀಧರ ಆರು ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಎರಡನೇ ಮಗನನ್ನೂ ಕಳೆದುಕೊಂಡಿದ್ದಾರೆ. ಸಂತೋಷ್ ಕುಮಾರ್ ಮೃತದೇಹವನ್ನು ಹುಟ್ಟೂರಿಗೆ ತರಲು ಬಹಳಷ್ಟು ಪ್ರಯಾಸಪಡಬೇಕಾಯಿತು. ಸಂಸದ ಸಿದ್ದೇಶ್ವರ್ ಮೂಲಕ ಪ್ರಯತ್ನ ಪಟ್ಟು ಮೃತದೇಹ ಹುಟ್ಟೂರಿಗೆ ತರಲಾಗಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.
An incident occurred recently in Germany in which a student of Saraswati Nagar barangay here died due to an electrical short circuit in the room as a result of the mobile phone equipment exploding. Residents like K. Revappa, A. Indiramma's son, Santoshkumar K.R., who was studying MS at Chemnitz University, Germany. (30) Deceased student. Santosh Kumar died on November 30 and the body reached the city on Thursday.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm