ಬ್ರೇಕಿಂಗ್ ನ್ಯೂಸ್
16-12-22 10:34 pm HK News Desk ಕರ್ನಾಟಕ
ಬೆಳಗಾವಿ, ಡಿ 16: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಒಂದು ದಿನದ ಭೇಟಿಗಾಗಿ ಅವರು ರಾಜ್ಯಕ್ಕೆ ಬರಲಿದ್ದಾರೆ.
ಎರಡು ದಿನಗಳ 'ರಾಷ್ಟ್ರೀಯ ಯುವಜನೋತ್ಸವ' ಉದ್ಘಾಟನೆಗೆ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದ ಜನ್ಮದಿನ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ಈ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದನ್ನು ಮೋದಿ ಉದ್ಘಾಟಿಸಲಿದ್ದಾರೆ.

ಬೆಳಗಾವಿಯ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಸುಮಾರು 6 ಸಾವಿರಕ್ಕೂ ಹೆಚ್ಚು ಯುವಕ/ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಪುಸ್ತಕ ಮೇಳವನ್ನು ಸಹ ಸಿಪಿಇಡಿ ಕ್ರೀಡಾಂಗಣ, ಸರ್ದಾರ್ ಹೈಸ್ಕೂಲ್ ಆವರಣದಲ್ಲಿ ಆಯೋಜನೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಗಣ್ಯರಿಗಾಗಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ.
ಪ್ರತಿ ವರ್ಷ ಒಂದು ರಾಜ್ಯದಲ್ಲಿ ಆಯೋಜನೆ; ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಪ್ರತಿ ವರ್ಷ ಒದೊಂದು ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಜನವರಿ 12ರಂದು ಆಯೋಜನೆ ಮಾಡುತ್ತದೆ.
ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ರಾಷ್ಟ್ರೀಯ ಯುವಜನೋತ್ಸವಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸುತ್ತಾರೆ. ಈ ಬಾರಿ ಕರ್ನಾಟಕದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.
ರಾಷ್ಟ್ರೀಯ ಯುವಜನೋತ್ಸವದ ಮೂಲಕ ದೇಶದ ಯುವಕರನ್ನು ಒಟ್ಟುಗೂಡಿಸುವುದು, ಯುವಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವುದು ಉದ್ದೇಶವಾಗಿದೆ. ಯುವಜನರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅನನ್ಯತೆಯ ವಿನಿಮಯಕ್ಕೆ ಇದು ವೇದಿಕೆಯಾಗಿದೆ.
Prime Minister Narendra Modi will be in Belagavi on 12th January to inaugurate two day National Youth Conference at District Stadium Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm