ಬ್ರೇಕಿಂಗ್ ನ್ಯೂಸ್
17-12-22 09:50 pm HK News Desk ಕರ್ನಾಟಕ
ರಾಮನಗರ, ಡಿ.17 : ನಮ್ಮ ಕುಟುಂಬಕ್ಕೆ ರಾಜಕೀಯ ಪುನರ್ಜನ್ಮ ನೀಡಿ ಬೆಳೆಸುತ್ತಿರುವ ಕ್ಷೇತ್ರದಲ್ಲಿ 2023ಕ್ಕೆ ನಮ್ಮ ಮಗ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ. ನಿಮ್ಮೆಲ್ಲರ ಸಹಕಾರ ನಮಗೆ ನೀಡಿದಂತೆ, ಆತನಿಗೂ ಇರಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ ವೇಳೆ ಈ ಘೋಷಣೆ ಮಾಡಲಾಗಿದೆ. 2023ರ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೇ ಈ ಕ್ಷೇತ್ರದ ಅಭ್ಯರ್ಥಿ ಎಂದು ಸ್ವತಃ ತಾಯಿ ಅನಿತಾ ಕುಮಾರಸ್ವಾಮಿ ಘೋಷಣೆ ಮಾಡುವ ತನ್ನ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿದ್ದಾರೆ. ಅನಿತಾ ಅವರ ಮಾತು ಕೇಳುತ್ತಿದ್ದಂತೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ನಮ್ಮ ಮಾವ, ನನ್ನ ಪತಿ ಹಾಗೂ ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡಬೇಕು. ಕೆಲವರು ಅಪಪ್ರಚಾರ ಮಾಡುತ್ತಿದ್ದರು, ಅವೆಲ್ಲಕ್ಕೂ ತೆರೆ ಎಳೆಯಬೇಕು ಎಂದು ನಿರ್ಧಾರ ಮಾಡಿದ್ದೆ. ಆತನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ, ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ನಿಖಿಲ್ ಅವರನ್ನು ಅಭ್ಯರ್ಥಿಯನ್ನಾಗಿಸಬೇಕೆಂದು ಕಾರ್ಯಕರ್ತರು, ಮುಖಂಡರು ಒತ್ತಡ ಹಾಕುತ್ತಿದ್ದರು. ನಾನು ತೀರ್ಮಾನ ಮಾಡುವ ಮೊದಲೇ ಅನಿತಾ ಕುಮಾರಸ್ವಾಮಿ ಘೋಷಿಸಿ ಬಿಟ್ಟಿದ್ದಾರೆ. ಅನಿರೀಕ್ಷಿತವಾಗಿ ಘೋಷಣೆಯಾಗಿದೆ. ಇಲ್ಲಿಯೂ ಕುತಂತ್ರ ರಾಜಕಾರಣ ನಡೆಯಬಹುದು. ಅದ್ಯಾವುದನ್ನೂ ಲೆಕ್ಕಿಸದೆ ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನ ಮುಂದಿನ ರಾಜಕೀಯ ಬದುಕು ನಿಮಗೆ ಬಿಟ್ಟಿದ್ದೇನೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.
JD(S) leader H D Kumaraswamy, who had earlier said that his son won’t contest the 2023 Karnataka assembly polls, on Saturday indicated the possibility of him fighting the election, stating that party workers will decide whether Anitha or Nikhil Kumaraswamy should be the candidate from here.Anitha, who is the wife of H D Kumaraswamy, currently represents Ramanagara assembly segment as MLA.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm