ಬ್ರೇಕಿಂಗ್ ನ್ಯೂಸ್
17-12-22 09:54 pm HK News Desk ಕರ್ನಾಟಕ
ದಾವಣಗೆರೆ, ಡಿ 17: ಹದಿನೈದು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವಜೋಡಿಯ ಬದುಕಿನಲ್ಲಿ ದುರಂತ ನಡೆದಿದೆ. ರಸ್ತೆ ಅಪಘಾತದಲ್ಲಿ ನವವಿವಾಹಿತ ಇಹಲೋಕ ತ್ಯಜಿಸಿದ್ದು, ಗಂಭೀರ ಗಾಯಗೊಂಡ ಪತ್ನಿ ಸ್ಟ್ರೆಚರ್ನಲ್ಲಿ ಮಲಗಿಕೊಂಡೇ ಕೊನೆಯ ಬಾರಿ ಪತಿಯ ಮುಖವನ್ನು ನೋಡಿದ ಕರಳುಹಿಂಡುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಬಳಿ ರಸ್ತೆ ಬದಿ ನಿಂತಿದ್ದ ಕಬ್ಬಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಸಂಜಯ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಂಜಯ್ ಪತ್ನಿ ಗಂಭೀರ ಗಾಯಗೊಂಡಿದ್ದಾರೆ.
ಕಳೆದ 15 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಸಂಜಯ್ ಹಾಗೂ ಪ್ರೀತಿ ಬೈಕ್ನಲ್ಲಿ ಸುತ್ತಾಡಲು ತೆರಳಿದ್ದರು. ಹಾವೇರಿ ಸುತ್ತಮುತ್ತಲಿನ ದೇವಸ್ಥಾನ, ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಬಳಿಕ ಜಿಗಳಿ ಗ್ರಾಮಕ್ಕೆ ವಾಪಸ್ ಆಗುತ್ತಿರುವಾಗ ಹಿರೇಕೆರೂರಿನ ಕೋಡ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಮೃತ ಸಂಜಯ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಸಂಜಯ್ ಮೃತದೇಹವನ್ನು ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ತರಲಾಯಿತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪ್ರೀತಿ, ಸ್ಟ್ರೆಚರ್ನಲ್ಲಿ ಬಂದು ಪತಿಯ ಮುಖ ಸವರುತ್ತಿರುವ, ಕಣ್ಣೀರು ಸುರಿಸುತ್ತಾ, ಮೃತದೇಹದ ಮುಂದೆ ಗೋಳಾಡುತ್ತಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.
ಜಿಗಳಿ ಗ್ರಾಮಕ್ಕೆ ಸಂಜಯ್ ಮೃತದೇಹ ಬರುತ್ತಿದ್ದಂತೆ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮದಲ್ಲಿ ಮೆರವಣಿಗೆ ನಡೆಸಿ ದುಃಖದ ಕೋಡಿಯಲ್ಲಿ ಸಂಜಯ್ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಚಿಕಿತ್ಸೆ ಬಳಿಕ ಪ್ರೀತಿ ಸುಧಾರಿಸಿಕೊಳ್ಳುತ್ತಿದ್ದು, ಪತಿಯನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.
A heartbreaking incident in which a newlywed died on the spot in a road accident on Sunday night took place near Koda in Hirekerur taluk of Haveri district. Four or five days have passed since this incident, and even today the family members are still in mourning. Sanjay (28), son of Rajaiah and Shobha of Jigali village of Matha in Harihar taluk of Davangere district, has been identified as a newlywed who died in an accident. Sanjay, who was a software engineer in a private company in Bangalore, got married to Preeti from Bailahongala on November 28 last month.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm