ಬ್ರೇಕಿಂಗ್ ನ್ಯೂಸ್
20-12-22 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಚಿವ ಸ್ಥಾನ ಸಿಗದ ಬೇಸರದಲ್ಲಿರುವ ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ ಅತ್ತ ಬೆಳಗಾವಿಯಲ್ಲಿ ಅಧಿವೇಶನ ಆಗುತ್ತಿದ್ದರೆ ಇತ್ತ ಇಮೋಶನಲ್ ಬ್ಲಾಕ್ಮೇಲ್ ನಡೆಸಲು ಮುಂದಾಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಕರೆದ ಈಶ್ವರಪ್ಪ, ತನಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. 30-40 ವರ್ಷ ಪಕ್ಷಕ್ಕಾಗಿ ದುಡಿದಿದ್ದೇನೆ. ಆದರೂ ಸಚಿವ ಸ್ಥಾನಕ್ಕಾಗಿ ಗೋಗರೆಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಇತ್ತೀಚೆಗೆ ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಮೇಶ್ ಜಾರಕಿಹೊಳಿ ಮತ್ತು ನನ್ನನ್ನು ಮತ್ತೆ ಸಚಿವ ಸ್ಥಾನಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿದ್ದರು. ಈಗಲೂ ನಿರೀಕ್ಷೆ ಹೊಂದಿದ್ದೇನೆ. ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಆಗಬಾರದು ಎಂದು ಬಾಯಿ ಕಟ್ಟಿ ಕುಳಿತಿದ್ದೆ. ಪಕ್ಷಕ್ಕಾಗಿ 30-40 ವರ್ಷಗಳಿಂದ ಯಡಿಯೂರಪ್ಪ, ಅನಂತ ಕುಮಾರ್ ಜೊತೆಗೆ ದುಡಿದಿದ್ದೇನೆ. ಇಂಥ ವ್ಯಕ್ತಿಗೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಯಾಕೆಂದು ಜನರೇ ನನಗೆ ಕೇಳುತ್ತಿದ್ದಾರೆ. ಮುಖ್ಯಮಂತ್ರಿ ಬಗ್ಗೆ ನನಗೆ ನಂಬಿಕೆ ಇದೆ, ಜೊತೆಗೆ ಪ್ರತಿಭಟಿಸುವ ಹಕ್ಕೂ ಇದೆ. ಹೀಗಾಗಿ ಅಧಿವೇಶನಕ್ಕೆ ಹಾಜರಾಗಲ್ಲ ಎಂದು ಪತ್ರವನ್ನೂ ಕೊಟ್ಟಿದ್ದೆ ಎಂದರು.

ನನಗೇನು ಸಚಿವನಾಗಬೇಕೆಂದು ಆಸೆ ಇಲ್ಲ. ಆದರೆ ಆಪಾದನೆ ಬಂದ ಕಾರಣಕ್ಕೆ ನೈತಿಕ ಹೊಣೆಯಲ್ಲಿ ರಾಜಿನಾಮೆ ನೀಡಿದ್ದೆ. ಈಗ ಕ್ಲೀನ್ ಚಿಟ್ ಸಿಕ್ಕಿರುವುದರಿಂದ ಮರಳಿ ಸಚಿವ ಸ್ಥಾನಕ್ಕೆ ಬಂದು ನನ್ನ ಮೇಲಿನ ಆಪಾದನೆಯಿಂದ ಮುಕ್ತನಾಗಲು ಬಯಸಿದ್ದೇನೆ. ನಾನು ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಆರೋಪ ಮುಕ್ತರಾಗಿದ್ದೇವೆ. ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಅಧಿವೇಶನಕ್ಕೆ ಹೋಗುವುದಿಲ್ಲವೇ ಎಂದು ಕೇಳಿದ್ದಕ್ಕೆ, ಆ ಬಗ್ಗೆ ಪಕ್ಷದ ಹಿರಿಯರ ಜೊತೆಗೆ ಮಾತನಾಡಿ ನಿರ್ಧರಿಸುತ್ತೇನೆ ಎಂದು ಹೇಳಿ ನುಣುಚಿಕೊಂಡರು. ಅತ್ತ ಅಧಿವೇಶನಕ್ಕೆ ಹಾಜರಾಗುವಂತೆ ಮತ್ತು ಹಲವು ಮಸೂದೆಗಳ ಮಂಡನೆ ಆಗುವುದರಿಂದ ಕಡ್ಡಾಯ ಹಾಜರಾತಿ ಬಗ್ಗೆ ವಿಪ್ ಜಾರಿ ಮಾಡಿರುತ್ತಾರೆ. ಹಾಗಿದ್ದರೂ, ಈಶ್ವರಪ್ಪ ತಮ್ಮ ಮೊಂಡು ಹಠ ಸಾಧಿಸಲು ಹೊರಟಿದ್ದಾರೆ. ಪಕ್ಷ ಮತ್ತು ಹೈಕಮಾಂಡನ್ನು ಎದುರು ಹಾಕಿ ಸಚಿವ ಸ್ಥಾನಕ್ಕಾಗಿ ಪರೋಕ್ಷವಾಗಿ ಒತ್ತಡ ಹೇರುತ್ತಿದ್ದಾರೆ.

ವಿಸ್ತರಣೆಗೆ ನೋ ಎಂದಿದ್ದ ದೆಹಲಿ ನಾಯಕರು
ಇತ್ತೀಚೆಗಷ್ಟೆ ದೆಹಲಿ ತೆರಳಿದ್ದ ಸಿಎಂ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಬಳಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ್ದರು. ದೆಹಲಿ ನಾಯಕರಿಂದ ಸಂಪುಟ ವಿಸ್ತರಣೆಗೆ ಅನುಮತಿ ಸಿಕ್ಕಿರಲಿಲ್ಲ. ಚುನಾವಣೆ ಹೊತ್ತಿನಲ್ಲಿ ಸಂಪುಟ ವಿಸ್ತರಣೆಗೆ ಕೈಹಾಕಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಸಲಹೆ ಮಾಡಿದ್ದರು. ಹೀಗಾಗಿ ಸಂಪುಟಕ್ಕೆ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಸೇರಿಸಿಕೊಳ್ಳುವ ಮುಖ್ಯಮಂತ್ರಿ ಇರಾದೆಗೆ ಇಂಬು ಸಿಕ್ಕಿರಲಿಲ್ಲ.
In the case of suicide of a contractor, the investigation has proved that the allegations against him are baseless. So former minister KS Eshwarappa insisted that he should be reinstated in the cabinet and held a press conference in this regard today in Bangalore. Eshwarappa, who spoke during the press conference, has got the promise of inclusion in the cabinet! So thanking CM Bommai (Basavaraj Bommai) he clarified that he will not take any tough decision for now.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm