ಬ್ರೇಕಿಂಗ್ ನ್ಯೂಸ್
23-12-22 02:37 pm HK News Desk ಕರ್ನಾಟಕ
ಬೆಂಗಳೂರು, ಡಿ.23: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದು ಮಹತ್ವದ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಕೋವಿಡ್ ಲಕ್ಷಣವುಳ್ಳ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಕೋವಿಡ್ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ಒಳಪಡಿಸಲು ಅಗತ್ಯ ಸಂಖ್ಯೆಯ ಟೀಂಗಳನ್ನು ಬಿಬಿಎಂಪಿ ಹಾಗೂ ಜಿಲ್ಲೆಗಳು ಕಾರ್ಯೋನ್ಮುಖಗೊಳಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ, ಅಂತರ ರಾಷ್ಟ್ರೀಯ ಪ್ರಯಾಣಿಕರ ಪೈಕಿ ಶೇ.2 ಅಂದರೆ ನಿರ್ದಿಷ್ಟ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಜೊತೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ಹೇಳಿದೆ.
ಎಲ್ಲಾ ಕೋವಿಡ್-19 ಪಾಸಿಟಿವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಡ್ಡಾಯವಾಗಿ ಕಳುಹಿಸಬೇಕು. ಕೋವಿಡ್ ಹೆಚ್ಚಳದ ಕಾರಣ ಎಲ್ಲಾ ಹಂತಗಳಲ್ಲೂ ಲಸಿಕಾಕರಣದ ಕ್ಯಾಂಪ್ ಆಯೋಜಿಸುವಂತೆ ತಿಳಿಸಿದೆ.
ಸಾರ್ವಜನಿಕರು ಹಾಗೂ ಸಭೆ, ಸಮಾರಂಭಗಳ ಆಯೋಜಕರಿಗೂ ಕೋವಿಡ್ ನಿಯಂತ್ರಣ ಸಲಹೆಯನ್ನು ಮಾಡಲಾಗಿದ್ದು ಮುಚ್ಚಿದ ಕೋಣೆಯ ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ.
ಅರ್ಹರೆಲ್ಲರೂ ಕೋವಿಡ್ ಲಸಿಕೆಯ ಫ್ರಿಕಾಶನರಿ ಡೋಸ್ ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟ ಸಮಸ್ಯೆ ಇರೋರು, ಕೋವಿಡ್ ಸೋಂಕಿನ ಲಕ್ಷಣ ಹೊಂದಿರೋರು, ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದೆ.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದಲ್ಲದೇ, ದೈಹಿಕ ಅಂತರವನ್ನು ಪಾಲಿಸುವಂತೆ ತಿಳಿಸಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಹೇಳಿದೆ.
The Karnataka government on Thursday decided to conduct mandatory testing of Influenza Like Illness (ILI) and Severe Acute Respiratory Illness (SARI) in the state amid a spurt in COVID-19 cases in some parts of the world, including China.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm