ಬ್ರೇಕಿಂಗ್ ನ್ಯೂಸ್
23-12-22 02:37 pm HK News Desk ಕರ್ನಾಟಕ
ಬೆಂಗಳೂರು, ಡಿ.23: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದು ಮಹತ್ವದ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಕೋವಿಡ್ ಲಕ್ಷಣವುಳ್ಳ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಕೋವಿಡ್ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ಒಳಪಡಿಸಲು ಅಗತ್ಯ ಸಂಖ್ಯೆಯ ಟೀಂಗಳನ್ನು ಬಿಬಿಎಂಪಿ ಹಾಗೂ ಜಿಲ್ಲೆಗಳು ಕಾರ್ಯೋನ್ಮುಖಗೊಳಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ, ಅಂತರ ರಾಷ್ಟ್ರೀಯ ಪ್ರಯಾಣಿಕರ ಪೈಕಿ ಶೇ.2 ಅಂದರೆ ನಿರ್ದಿಷ್ಟ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಜೊತೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ಹೇಳಿದೆ.
ಎಲ್ಲಾ ಕೋವಿಡ್-19 ಪಾಸಿಟಿವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಡ್ಡಾಯವಾಗಿ ಕಳುಹಿಸಬೇಕು. ಕೋವಿಡ್ ಹೆಚ್ಚಳದ ಕಾರಣ ಎಲ್ಲಾ ಹಂತಗಳಲ್ಲೂ ಲಸಿಕಾಕರಣದ ಕ್ಯಾಂಪ್ ಆಯೋಜಿಸುವಂತೆ ತಿಳಿಸಿದೆ.
ಸಾರ್ವಜನಿಕರು ಹಾಗೂ ಸಭೆ, ಸಮಾರಂಭಗಳ ಆಯೋಜಕರಿಗೂ ಕೋವಿಡ್ ನಿಯಂತ್ರಣ ಸಲಹೆಯನ್ನು ಮಾಡಲಾಗಿದ್ದು ಮುಚ್ಚಿದ ಕೋಣೆಯ ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ.
ಅರ್ಹರೆಲ್ಲರೂ ಕೋವಿಡ್ ಲಸಿಕೆಯ ಫ್ರಿಕಾಶನರಿ ಡೋಸ್ ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟ ಸಮಸ್ಯೆ ಇರೋರು, ಕೋವಿಡ್ ಸೋಂಕಿನ ಲಕ್ಷಣ ಹೊಂದಿರೋರು, ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಮಾಡಿದೆ.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದಲ್ಲದೇ, ದೈಹಿಕ ಅಂತರವನ್ನು ಪಾಲಿಸುವಂತೆ ತಿಳಿಸಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಹೇಳಿದೆ.
The Karnataka government on Thursday decided to conduct mandatory testing of Influenza Like Illness (ILI) and Severe Acute Respiratory Illness (SARI) in the state amid a spurt in COVID-19 cases in some parts of the world, including China.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:08 pm
Mangalore Correspondent
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm