ರಾಜಕುಮಾರ್ ಕುಟುಂಬದ ಬಗ್ಗೆ ಅವಹೇಳನ ; ಹಿಂದೂ ಸಂಘಟನೆ ಮುಖಂಡ ಪುನೀತ್​​ ಕೆರೆಹಳ್ಳಿಗೆ ಧರ್ಮದೇಟು!

24-12-22 04:28 pm       Bangalore Correspondent   ಕರ್ನಾಟಕ

ರಾಜಕುಮಾರ್‌ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್‌ ಮತ್ತು ತಂಡ ಹಲ್ಲೆ ನಡೆಸಿದೆ. 

ಬೆಂಗಳೂರು, ಡಿ.24: ರಾಜಕುಮಾರ್‌ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್‌ ಮತ್ತು ತಂಡ ಹಲ್ಲೆ ನಡೆಸಿದೆ. 

ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್‌ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್‌ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. 

ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್‌ ಕೆರೆಹಳ್ಳಿ, ಪುನೀತ್‌ ರಾಜ್‌ಕುಮಾರ್‌ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್‌ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್‌ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್‌ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.