ಬ್ರೇಕಿಂಗ್ ನ್ಯೂಸ್
25-12-22 01:33 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25 : ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಬಗ್ಗೆ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್ಸಿಎ) ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಇತರ ಐವರನ್ನು ವೈಯಾಲಿಕಾವಲ್ ಪೊಲೀಸರು ಮಾನನಷ್ಟ ಪ್ರಕರಣದಲ್ಲಿ ಬಂಧಿಸಿದ್ದು ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.
ಕಾಮಗಾರಿ ಟೆಂಡರ್ ನೀಡಲು ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ಕೇಳುತ್ತಾರೆ ಎಂಬ ಆರೋಪದ ವಿರುದ್ಧ ತೋಟಗಾರಿಕಾ ಸಚಿವ ಎನ್. ಮುನಿರತ್ನ ಅವರು ಕೆಂಪಣ್ಣ ಹಾಗೂ ಗುತ್ತಿಗೆದಾರರ ಸಂಘದ ಇತರ 18 ಸದಸ್ಯರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುನಿರತ್ನ ಅವರು 50 ಕೋಟಿ ರೂ. ಪರಿಹಾರ ನೀಡುವಂತೆ ಕೋರಿ ಸೆಪ್ಟೆಂಬರ್ 1ರಂದು ಸಂಘಕ್ಕೆ ನೋಟಿಸ್ ಕಳುಹಿಸಿದ್ದರು.
ನೋಟಿಸ್ಗೆ ಉತ್ತರಿಸಲು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಅಥವಾ ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯವನ್ನು ನೀಡುವಂತೆ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘಕ್ಕೆ ಅಂತಿಮ ಗಡುವು ನೀಡಿದ್ದರು. ಸಂಘವು ತನ್ನ ಯಾವುದೇ ಷರತ್ತುಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಸಚಿವರು ವಿಚಾರಣಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಮುನಿರತ್ನ ಅವರು ತನ್ನ ವಿರುದ್ಧ ಕೆಎಸ್ಸಿಎ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ಆದೇಶವನ್ನೂ ತಂದಿದ್ದರು.
ವಾರಂಟ್ ನೋಟಿಸ್ ಮಾಡಿದ್ದರೂ ವಿಚಾರಣೆಗೆ ಹಾಜರಾಗದ್ದಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ಹಾಗೂ ಇತರರ ವಿರುದ್ಧ ಡಿ.19ರಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ವೈಯಾಲಿಕಾವಲ್ ಪೊಲೀಸರು ಕೆಂಪಣ್ಣ, ನಟರಾಜ್, ಕೃಷ್ಣಾ ರೆಡ್ಡಿ, ಗುರುಸಿದ್ದಪ್ಪ ಎಂಬವರನ್ನು ಬಂಧಿಸಿದ್ದು ಶನಿವಾರ ರಾತ್ರಿ ಜಡ್ಜ್ ನಿವಾಸದಲ್ಲಿ ಹಾಜರು ಪಡಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪದ್ದಲ್ಲದ ಕಾರಣ ನ್ಯಾಯಾಧೀಶರು ಸ್ಥಳದಲ್ಲೇ ಜಾಮೀನು ನೀಡಿದ್ದಾರೆ. ಅಲ್ಲದೆ, ಸೋಮವಾರ ಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
The Karnataka police arrested the contractor association president D Kempanna following a court order on Saturday. The development resulted from a defamation case filed by the Horticulture Minister Munirathna against Kempanna after he alleged that the minister took a bribe.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm