ಬ್ರೇಕಿಂಗ್ ನ್ಯೂಸ್
26-12-22 12:44 pm HK News Desk ಕರ್ನಾಟಕ
ಬೆಳಗಾವಿ, ಡಿ.26 : ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ಒಬ್ಬ ವ್ಯಕ್ತಿ ಸೇರಿದಂತೆ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬಂದಿರುವ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕಿನ ಬಗ್ಗೆ ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ಸಚಿವರು ತಿಳಿಸಿದ್ದಾರೆ.
Bangalore seven international travellers detected with BF7 covid virus.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm