ಬ್ರೇಕಿಂಗ್ ನ್ಯೂಸ್
16-10-20 10:44 am Mangalore Correspondent ಕರ್ನಾಟಕ
ಮಂಗಳೂರು, ಅಕ್ಟೋಬರ್ 16: ಕೊರೊನಾ ಸೋಂಕಿಗೆ ಒಳಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮೂಡುಬಿದ್ರೆಯ ಶಿಕ್ಷಕಿ ಪದ್ಮಾಕ್ಷಿ ಎನ್. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಿಕ್ಷಕಿ ಸಾವು - ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ನಡುವೆ, ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ತಾಯಿ ಕೊರೋನಾಗೆ ತುತ್ತಾಗಿದ್ದಾರೆಂದು ಪುತ್ರಿ ಜಾಲತಾಣದಲ್ಲಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ವೈರಲ್ ಆಗಿತ್ತು. ಪತ್ರ ಗಮನಿಸಿ, ಸಿಎಂ ಯಡಿಯೂರಪ್ಪ ಶಿಕ್ಷಕಿಯ ಸಂಪೂರ್ಣ ಚಿಕಿತ್ಸೆ ಭರಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಈ ಬಗ್ಗೆ ದ.ಕ. ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಕ್ತವಾಗಿ ಸ್ಪಂದಿಸುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಏರ್ಪಾಡು ಮಾಡುವಂತೆ ಸೂಚನೆ ನೀಡಿದ್ದರು. ಈ ಮಧ್ಯೆ ಅ.13ರಂದು ಶಿಕ್ಷಕಿಯ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದಾಗಿ ಆಸ್ಪತ್ರೆಯಿಂದ ತಿಳಿಸಲಾಗಿತ್ತು.
ಆದರೆ, ಕೊರೊನಾ ಬಳಿಕ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಈಗ ಸಾವನ್ನಪ್ಪಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೂಡಬಿದ್ರೆಯ ಮಕ್ಕಿ ಜವಹಾರಲಾಲ್ ನೆಹರು ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಪದ್ಮಾಕ್ಷಿ ಶಿಕ್ಷಕಿಯಾಗಿದ್ದರು. ಅವರ ಪತಿ ಶಶಿಕಾಂತ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೇ ವೇಳೆ, ಚಿಕಿತ್ಸೆಗೆ ಹಣವಿಲ್ಲ ಎಂದು ಪುತ್ರಿ ಐಶ್ವರ್ಯಾ ಜೈನ್ ಫೇಸ್ ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am