ಬ್ರೇಕಿಂಗ್ ನ್ಯೂಸ್
26-12-22 10:27 pm HK News Desk ಕರ್ನಾಟಕ
ಹಾಸನ, ಡಿ.26 : ಹಾಸನದ ಕೊರಿಯರ್ ಶಾಪ್ ನಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿಯೊಂದು ಬ್ಲಾಸ್ಟ್ ಆಗಿದ್ದು ಕಚೇರಿಯಲ್ಲಿದ್ದ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ಫೋಟ ನಡೆದಿರುವುದು ಆತಂಕ ಮೂಡಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ಮಿಕ್ಸಿ ಪಾರ್ಸಲ್ ಬಂದಿದ್ದು, ಅದನ್ನು ಹಾಸನ ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್ ಕಚೇರಿಗೆ ವ್ಯಕ್ತಿ ಬಾಕ್ಸನ್ನು ವಾಪಸ್ ನೀಡಿದ್ದರು. ವಾಪಸ್ ಪಡೆಯುವ ವೇಳೆ ಮಿಕ್ಸಿಯನ್ನು ಕೊರಿಯರ್ ಕಚೇರಿಯ ಶಶಿ ಎಂಬವರು ಆನ್ ಮಾಡಿ ಪರಿಶೀಲನೆ ನಡೆಸಿದ್ದು ಆನ್ ಮಾಡಿದ ಬೆನ್ನಲ್ಲೇ ಮಿಕ್ಸಿ ಬ್ಲಾಸ್ಟ್ ಆಗಿದ್ದು ಸ್ಫೋಟದ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿ ಪುಡಿಯಾಗಿದೆ. ಗೋಡೆಗೂ ಹಾನಿಯಾಗಿದೆ.
ಹಾಸನ ನಗರದ ಕೆ.ಆರ್ ಪುರಂನ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶಂಕಾಸ್ಪದ ಬ್ಲಾಸ್ಟ್ ವದಂತಿಗಳು ಹರಡುತ್ತಿವೆ. ಕೊರಿಯರ್ ಶಾಪ್ ಸಿಬಂದಿ ಶಶಿ ಬಲಗೈ ಛಿದ್ರಗೊಂಡಿದ್ದು ಹೊಟ್ಟೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಬ್ಲಾಸ್ಟ್ ಗೆ ಏನು ಕಾರಣ ಇದೆ ಎಂದು ಕಂಡುಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ತಂಡ ಬರುತ್ತಾರೆ. ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನೋ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕಿಟ್ ಆಗಿದೆಯೋ ಬೇರೆ ಏನಾದ್ರು ಇದೆಯೋ ಪರಿಶೀಲನೆ ನಡೆಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
An incident took place where a parcel arrived at a courier shop in Hassan and a mixie blasted. Two days ago, the mixed parcel arrived at the DTDC Courier Shop on the Sub-Register Office Road of KR Puram Barangay of Hassan Nagar. Now there is a mixi blast and the owner of the courier, Shashi, has been seriously injured and admitted to a private hospital in Hassan.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm