ಬ್ರೇಕಿಂಗ್ ನ್ಯೂಸ್
26-12-22 10:27 pm HK News Desk ಕರ್ನಾಟಕ
ಹಾಸನ, ಡಿ.26 : ಹಾಸನದ ಕೊರಿಯರ್ ಶಾಪ್ ನಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿಯೊಂದು ಬ್ಲಾಸ್ಟ್ ಆಗಿದ್ದು ಕಚೇರಿಯಲ್ಲಿದ್ದ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ಫೋಟ ನಡೆದಿರುವುದು ಆತಂಕ ಮೂಡಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ಮಿಕ್ಸಿ ಪಾರ್ಸಲ್ ಬಂದಿದ್ದು, ಅದನ್ನು ಹಾಸನ ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್ ಕಚೇರಿಗೆ ವ್ಯಕ್ತಿ ಬಾಕ್ಸನ್ನು ವಾಪಸ್ ನೀಡಿದ್ದರು. ವಾಪಸ್ ಪಡೆಯುವ ವೇಳೆ ಮಿಕ್ಸಿಯನ್ನು ಕೊರಿಯರ್ ಕಚೇರಿಯ ಶಶಿ ಎಂಬವರು ಆನ್ ಮಾಡಿ ಪರಿಶೀಲನೆ ನಡೆಸಿದ್ದು ಆನ್ ಮಾಡಿದ ಬೆನ್ನಲ್ಲೇ ಮಿಕ್ಸಿ ಬ್ಲಾಸ್ಟ್ ಆಗಿದ್ದು ಸ್ಫೋಟದ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿ ಪುಡಿಯಾಗಿದೆ. ಗೋಡೆಗೂ ಹಾನಿಯಾಗಿದೆ.





ಹಾಸನ ನಗರದ ಕೆ.ಆರ್ ಪುರಂನ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶಂಕಾಸ್ಪದ ಬ್ಲಾಸ್ಟ್ ವದಂತಿಗಳು ಹರಡುತ್ತಿವೆ. ಕೊರಿಯರ್ ಶಾಪ್ ಸಿಬಂದಿ ಶಶಿ ಬಲಗೈ ಛಿದ್ರಗೊಂಡಿದ್ದು ಹೊಟ್ಟೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.


ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಬ್ಲಾಸ್ಟ್ ಗೆ ಏನು ಕಾರಣ ಇದೆ ಎಂದು ಕಂಡುಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ತಂಡ ಬರುತ್ತಾರೆ. ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನೋ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕಿಟ್ ಆಗಿದೆಯೋ ಬೇರೆ ಏನಾದ್ರು ಇದೆಯೋ ಪರಿಶೀಲನೆ ನಡೆಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
An incident took place where a parcel arrived at a courier shop in Hassan and a mixie blasted. Two days ago, the mixed parcel arrived at the DTDC Courier Shop on the Sub-Register Office Road of KR Puram Barangay of Hassan Nagar. Now there is a mixi blast and the owner of the courier, Shashi, has been seriously injured and admitted to a private hospital in Hassan.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm