ಬ್ರೇಕಿಂಗ್ ನ್ಯೂಸ್
26-12-22 10:27 pm HK News Desk ಕರ್ನಾಟಕ
ಹಾಸನ, ಡಿ.26 : ಹಾಸನದ ಕೊರಿಯರ್ ಶಾಪ್ ನಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿಯೊಂದು ಬ್ಲಾಸ್ಟ್ ಆಗಿದ್ದು ಕಚೇರಿಯಲ್ಲಿದ್ದ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ಫೋಟ ನಡೆದಿರುವುದು ಆತಂಕ ಮೂಡಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ಮಿಕ್ಸಿ ಪಾರ್ಸಲ್ ಬಂದಿದ್ದು, ಅದನ್ನು ಹಾಸನ ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್ ಕಚೇರಿಗೆ ವ್ಯಕ್ತಿ ಬಾಕ್ಸನ್ನು ವಾಪಸ್ ನೀಡಿದ್ದರು. ವಾಪಸ್ ಪಡೆಯುವ ವೇಳೆ ಮಿಕ್ಸಿಯನ್ನು ಕೊರಿಯರ್ ಕಚೇರಿಯ ಶಶಿ ಎಂಬವರು ಆನ್ ಮಾಡಿ ಪರಿಶೀಲನೆ ನಡೆಸಿದ್ದು ಆನ್ ಮಾಡಿದ ಬೆನ್ನಲ್ಲೇ ಮಿಕ್ಸಿ ಬ್ಲಾಸ್ಟ್ ಆಗಿದ್ದು ಸ್ಫೋಟದ ತೀವ್ರತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿ ಪುಡಿಯಾಗಿದೆ. ಗೋಡೆಗೂ ಹಾನಿಯಾಗಿದೆ.
ಹಾಸನ ನಗರದ ಕೆ.ಆರ್ ಪುರಂನ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದ್ದು ಶಂಕಾಸ್ಪದ ಬ್ಲಾಸ್ಟ್ ವದಂತಿಗಳು ಹರಡುತ್ತಿವೆ. ಕೊರಿಯರ್ ಶಾಪ್ ಸಿಬಂದಿ ಶಶಿ ಬಲಗೈ ಛಿದ್ರಗೊಂಡಿದ್ದು ಹೊಟ್ಟೆ, ಮುಖಕ್ಕೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಎಸ್ಪಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಪೆಟ್ಟಾಗಿದೆ. ಯಾವುದೇ ಪ್ರಾಣಾಪಾಯ ಇಲ್ಲ. ಬ್ಲಾಸ್ಟ್ ಗೆ ಏನು ಕಾರಣ ಇದೆ ಎಂದು ಕಂಡುಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ತಂಡ ಬರುತ್ತಾರೆ. ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತದೆ. ಕೊರಿಯರ್ ಎಲ್ಲಿಂದ ಬಂತು ಎನ್ನೋ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕಿಟ್ ಆಗಿದೆಯೋ ಬೇರೆ ಏನಾದ್ರು ಇದೆಯೋ ಪರಿಶೀಲನೆ ನಡೆಸುತ್ತೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
An incident took place where a parcel arrived at a courier shop in Hassan and a mixie blasted. Two days ago, the mixed parcel arrived at the DTDC Courier Shop on the Sub-Register Office Road of KR Puram Barangay of Hassan Nagar. Now there is a mixi blast and the owner of the courier, Shashi, has been seriously injured and admitted to a private hospital in Hassan.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm