ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.


30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm