ಬ್ರೇಕಿಂಗ್ ನ್ಯೂಸ್
28-12-22 04:37 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.28: ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವುಗೈದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಮಾಡಿದೆ.
ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ದ ತನಿಖೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ಕಪ್ಪು ಪಟ್ಟಿಗೆ ಸೇರಿದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ರಮ ಹಾಗೂ ಟೆಂಡರ್ಗಳನ್ನು ಸಂಸ್ಥೆಗೆ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ಸಹಿತ ಗುತ್ತಿಗೆಯನ್ನು ಬಿಬಿಎಂಪಿ ನೀಡಿತ್ತು. 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್ಎ(ವೋಟರ್ ಹೆಲ್ಪ್ ಲೈನ್ ಆ್ಯಪ್) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು. ಆದರೆ ಖಾಸಗಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು.
Bangalore Chilume Social Service Society listed to black list for misuse of Voters list.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm