ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm