ಬ್ರೇಕಿಂಗ್ ನ್ಯೂಸ್
31-12-22 12:45 pm HK News Desk ಕರ್ನಾಟಕ
ತುಮಕೂರು, ಡಿ.31 : ಕಮಿಷನ್ ದಂಧೆ, ಸಾಲಗಾರರ ಕಾಟದಿಂದ ಬೇಸತ್ತು ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಗುತ್ತಿಗೆದಾರ ಪ್ರಸಾದ್ ಸಾಲಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಿಗೆದಾರ ಪ್ರಸಾದ್ ಮಧುಗಿರಿ ಮೂಲದವರಾಗಿದ್ದು, ತುಮಕೂರಿನ ಸಪ್ತಗಿರಿ ಬಡವಾಣೆಯಲ್ಲಿ ವಾಸವಾಗಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿಸಿದ್ದರು. ಆದರೆ ಇಲಾಖೆಯಲ್ಲಿ ಸರಿಯಾದ ಸಮಯಕ್ಕೆ ಬಿಲ್ ಪಾವತಿಯಾಗದ ಹಿನ್ನೆಲೆ ಒಂದೂವರೆ ಕೋಟಿ ರೂ. ಸಾಲ ಮಾಡಿಕೊಂಡಿದ್ದರು.
ಪ್ರತಿನಿತ್ಯ ಸಾಲ ಕೊಟ್ಟವರು ಮನೆ ಹತ್ತಿರ ಬಂದು ಜಗಳ ಮಾಡುತ್ತಿದ್ದರು. ಇದರಿಂದ ಮನನೊಂದು ದೇವರಾಯದುರ್ಗದ ಪ್ರವಾಸಿ ಮಂದಿರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದೇ ರೀತಿ ಸಾಲ ಮಾಡಿಕೊಂಡ ಗುತ್ತಿಗೆದಾರರು ಸಾಲಗಾರರ ಕಾಟ ತಾಳಲಾರದೆ ಊರು ಬಿಟ್ಟವರಿದ್ದಾರೆ. ಸರ್ಕಾರದ 40% ಕಮಿಷನ್ ಹಾಗೂ ಸಾಲಗಾರರ ಕಾಟಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗುತ್ತಿಗೆದಾರರ ಸಂಘದವರು ಆರೋಪಿಸಿದ್ದಾರೆ.
ಆರು ತಿಂಗಳ ಹಿಂದೆ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮಿಷನ್ ದಂಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣಾಗಿರುವುದು ಬಿಜೆಪಿ ಸರ್ಕಾರದ ಮೇಲೆ ಗಂಭೀರ ಆರೋಪ ಕೇಳಿಬರುವಂತಾಗಿದೆ. 40 ಶೇ. ಕಮಿಷನ್ ಕೇಳುವ ಕೆಲ ಶಾಸಕರು ಮತ್ತು ಅಧಿಕಾರಿಗಳಿಂದಲೇ ಈ ರೀತಿ ಗುತ್ತಿಗೆದಾರರು ಸಾವಿಗೀಡಾಗಲು ಕಾರಣ. ಕಮಿಷನ್ ಕೊಟ್ರು ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಬಿಲ್ ಮಾಡಿ ಕೊಡುತ್ತಿಲ್ಲ ಎಂದು ಗುತ್ತಿದಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
Another contractor in Karnataka has committed suicide. TN Prasad, a 50-year-old contractor, died by suicide in Tumkuru district of Karnataka. Unable to bear the losses, and constant harassment from loan sharks, Prasad allegedly hanged himself. The friends of the deceased also claimed that his bills were not cleared by the government. "They were pending for very long time. He had sold his newly constructed house a couple of months ago to repay loans," said an associate of Prasad.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm