ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm