ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm