ಬ್ರೇಕಿಂಗ್ ನ್ಯೂಸ್
02-01-23 03:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ಲಂಚ ಕೇಳಿದ್ದಕ್ಕಾಗಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪ್ರತಿಯಾಗಿ ಅಬಕಾರಿ ಇನ್ಸ್ಪೆಕ್ಟರ್ ಅಧಿಕಾರಿ ತನ್ನ ಚೇಲಾಗಳಿಂದ ಬಾರ್ ಅಂಡ್ ರೆಸ್ಟೊರೆಂಟಿಗೇ ತಡರಾತ್ರಿ ಬೆಂಕಿ ಹಚ್ಚಿಸಿದ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಿಡಿಸಿದ ಅಧಿಕಾರಿ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾರ್ ಅಂಡ್ ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ. ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು ಮತ್ತು ಮದ್ಯದ ಬಾಟಲಿ ಬೆಂಕಿಗಾಹುತಿಯಾಗಿದೆ. ಮೊದಲು ಘಟನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಬೆಸ್ಕಾಂ ಅಧಿಕಾರಿಗಳು ಶಾರ್ಟ್ ಸರ್ಕ್ಯೂಟ್ ನಿಂದ ಅಪಘಾತ ಸಂಭವಿಸಿಲ್ಲ ಎಂದು ವರದಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಬಾರ್ ಮಾಲೀಕ ರಾಮಕೃಷ್ಣ, ಕೆಂಗೇರಿ ವಲಯ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಎಸಿಬಿಗೆ ದೂರು ಕೊಟ್ಟಿದ್ದಕ್ಕಾಗಿ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಇಟ್ಟು ಪ್ರತಿಕಾರ ತೀರಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಮಾಚೋಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ರಾಮಕೃಷ್ಣ ಎಂಬವರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ್ 15 ಲಕ್ಷ ಬೇಡಿಕೆ ಇಟ್ಟಿದ್ದರು. ಅದಕ್ಕೆ, ಬಾರ್ ಮಾಲಿಕ ರಾಮಕೃಷ್ಣ ಬಂಗಾರ ಅಡ ಇಟ್ಟು 10 ಲಕ್ಷ ಹಣ ಕೊಟ್ಟಿದ್ದರು. ಉಳಿದ ಐದು ಲಕ್ಷ ಕೊಡಲೇಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಬೇಸತ್ತು ರಾಮಕೃಷ್ಣ ಎಸಿಬಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಎಸಿಬಿ ದಾಳಿಗೆ ಒಳಗಾಗಿ ಇನ್ಸ್ ಪೆಕ್ಟರ್ ಮಂಜುನಾಥ್ ಬಂಧನಕ್ಕೊಳಗಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ರಾಮಕೃಷ್ಣ ಅವರ ಮಾಲೀಕತ್ವದ ಬಾರ್ ಗೆ ಬೆಂಕಿ ಹಾಕಿಸಿದ ಗಂಭೀರ ಆರೋಪ ಕೇಳಿಬಂದಿದೆ.
An excise inspector set fire to a bar and restaurant after complaining to the Lokayukta that he had asked for a bribe. Manjunath, the officer who set the fire, has now filed a complaint against him at the Annapurneshwari Nagar police station, the owner of the bar and restaurant.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm