ಬ್ರೇಕಿಂಗ್ ನ್ಯೂಸ್
16-10-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ.
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ.


ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
Bangalore RR Nagara By-Elections Kpcc President DK Shivakumar gives Surprise to team JDS through operation Astha.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm