ಬ್ರೇಕಿಂಗ್ ನ್ಯೂಸ್
16-10-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ.
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ.


ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
Bangalore RR Nagara By-Elections Kpcc President DK Shivakumar gives Surprise to team JDS through operation Astha.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm