ಬ್ರೇಕಿಂಗ್ ನ್ಯೂಸ್
16-10-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ.
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ.


ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
Bangalore RR Nagara By-Elections Kpcc President DK Shivakumar gives Surprise to team JDS through operation Astha.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am