ಬ್ರೇಕಿಂಗ್ ನ್ಯೂಸ್
03-01-23 02:35 pm HK News Desk ಕರ್ನಾಟಕ
ವಿಜಯಪುರ,ಜ.3: ಸರಳ ಜೀವನಕ್ಕೆ, ನೇರ ನಡೆನುಡಿಗಳಿಗೆ ಹೆಸರಾಗಿದ್ದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಇಹದ ಬದುಕು ಮಾತ್ರವಲ್ಲ, ಮೃತ್ಯು ಆವರಿಸಿದ ನಂತರ ತನ್ನ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂದು ಕೂಡಾ ಮೊದಲೇ ಬರೆದಿಟ್ಟಿದ್ದರು.
೨೦೧೪ರ ಗುರುಪೂರ್ಣಿಮೆಯಂದು ಅವರು ಬರೆದಿಟ್ಟ ಅಭಿವಂದನ ಪತ್ರದಲ್ಲಿ ತನ್ನ ಅಂತ್ಯಕ್ರಿಯೆ ಹೇಗೆ ಮಾಡಬೇಕು ಎಂದೂ ಹೇಳಿದ್ದಾರೆ. ಅಚ್ಚರಿ ಎಂದರೆ, ಎಂಟು ವರ್ಷದ ಬಳಿಕ ೨೦೨೨ರ ವೈಕುಂಠ ಏಕಾದಶಿಯಂದು ಅವರು ದೇಹ ತ್ಯಾಗ ಮಾಡಿದ್ದಾರೆ.

ಅಂತ್ಯ ಸಂಸ್ಕಾರದ ಬಗ್ಗೆ ಅವರು ಬರೆದಿಟ್ಟಿರುವ ಅಂಶಗಳು ಇಂತಿವೆ. ತನ್ನ ಪಾರ್ಥಿವ ಶರೀರವನ್ನು ಭೂಮಿಯಲ್ಲಿ ಇಡುವ ಬದಲು ಪಂಚಭೂತಗಳಲ್ಲಿ ಲೀನವಾಗಲು ಸಾಧ್ಯವಾಗುವಂತೆ ಅಗ್ನಿಗರ್ಪಿಸುವಂತೆ ಸೂಚಿಸಿದ್ದಾರೆ. ಯಾವ ಕಾರಣಕ್ಕೂ ಶ್ರಾದ್ಧಾದಿ ವಿಧಿ ವಿಧಾನಗಳನ್ನು ಮಾಡುವುದು ಅನಗತ್ಯ ಎಂದು ಹೇಳಿದ್ದಾರೆ.
ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು ಎಂದು ಸೂಚಿಸಿರುವ ಅವರು, ಯಾವುದೇ ಬಗೆಯ ಸ್ಮಾರಕ ನಿರ್ಮಿಸಬಾರದು ಎಂದು ಸ್ಪಷ್ಟಪಡಿಸಿದ್ದಾರೆ.


ನನ್ನದು ಸಾವಧಾನದ ಸಾಮಾನ್ಯ ಬದುಕು
ಎಂಟು ವರ್ಷಗಳ ಹಿಂದೆ ಬರೆದ ಪತ್ರದಲ್ಲಿ ತನ್ನ ಬದುಕನ್ನು ತಾನೇ ವಿಮರ್ಶಿಸಿಕೊಂಡಿದ್ದು ಹೀಗೆ: ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು 'ಗುರುದೇವರು, ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈ ಮನಸ್ಸುಗಳಿಗೆ ತಂಪನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿಬೆಳಗ ಹರಡಿವೆ. ಜಾಗತಿಕ ತತ್ತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಟಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ 'ಉಪಕೃತ' ಎಂದಿದ್ದಾರೆ.

ಸಾವಿನ ಬಗ್ಗೆ ಸ್ಪಷ್ಟವಾಗಿ ಮಾತನಾಡಿರುವ ಅವರು, ʻʻಬದುಕು ಮುಗಿಯುತ್ತದೆ; ದೀಪ ಆರಿದಂತೆ; ತೆರೆ ಅಡಗಿದಂತೆ; ಮೇಘ ಕರಗಿದಂತೆ. ಉಳಿಯುವುದು ಬರಿ ಬಯಲು. ಮಹಾಮೌನ. ಶೂನ್ಯಸತ್ಯʼʼ ಎಂದಿದ್ದಾರೆ.
ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ; ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು; ಅದಕ್ಕಾಗಿ ಈ 'ಅಂತಿಮ ಅಭಿವಂದನ ಪತ್ರʼ ಎಂದಿದ್ದಾರೆ ಅವರು.
Siddeshwar Swamiji had written a letter 8 years ago about how his final rites should be performed. Arrangements have been made for the devotees to pay their last respects to his mortal remains till Tuesday 4.30 p.m. Siddeshwar Swamiji’s last rites will be performed on the ashram premises as per his wishes.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm