ಬ್ರೇಕಿಂಗ್ ನ್ಯೂಸ್
04-01-23 06:47 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಡ್ರಮ್ ಪರಿಶೀಲನೆ ಮಾಡಿದಾಗ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ.
ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಸೀಲ್ ಮಾಡಿಟ್ಟಿದ್ದರು. ಇಂದು ವಾಸನೆ ಬಂದಾಗ ನೋಡಿಕೊಂಡಿರುವ ರೈಲ್ವೇ ಪೊಲೀಸರು ತೆಗೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಸದ್ಯ ಯುವತಿಯ ಗುರುತು ಪತ್ತೆ ಹಚ್ಚುತ್ತಿರುವ ಯಶವಂತಪುರ ರೈಲ್ವೇ ಪೊಲೀಸರು, ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕುತ್ತಿಗೆಗೆ ಬಟ್ಟೆಯಿಂದ ಬಿಗಿಯಲಾಗಿದೆ: ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಜಯಮ್ಮ ಪ್ಲಾಸ್ಟಿಕ್ ಡ್ರಮ್ ನಲ್ಲಿ ಶವದ ವಾಸನೆ ಬರುತ್ತಿದ್ದನ್ನ ಕಂಡು ಎಂಬಾಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಡ್ರಮ್ ಪರಿಶೀಲನೆ ನಡೆಸಿದಾಗ ಶವ ಪತ್ತೆಯಾಗಿದೆ. ಶವದ ಕುತ್ತಿಗೆಯಲ್ಲಿ ಬಿಳಿ ಬಣ್ಣದ ದುಪ್ಪಟ್ಟದಿಂದ ಗಂಟು ಬಿಗಿದಿರುವುದು ಪತ್ತೆಯಾಗಿದೆ. ಸುಮಾರು 23 ವರ್ಷ ವಯಸ್ಸಿನ ಮಹಿಳೆ ಮೃತದೇಹ ಎಂದು ಅಂದಾಜಿಸಲಾಗಿದೆ. ಇನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಪಡಿಸಲು ಡ್ರಮ್ ನಲ್ಲಿ ಶವ ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಶವ ಕೊಳೆಯುವಂತೆ ಕೆಮಿಕಲ್ ಡ್ರಮ್ ನಲ್ಲಿ ದುಷ್ಕರ್ಮಿಗಳು ಹಾಕಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತಂಕಗೊಂಡ ಪ್ರಯಾಣಿಕರು: ಇನ್ನು ರೈಲ್ವೆ ನಿಲ್ದಾಣದಲ್ಲಿ ಯುವತಿ ಶವ ಪತ್ತೆಯಾಗುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದಾರೆ. ದಿನದ ೨೪ ಗಂಟೆ ವೇಳೆಯೂ ರೈಲಿಗಾಗಿ ನಿಲ್ದಾಣದಲ್ಲಿ ಕಾಯುತ್ತಾ ಕುಳಿತುಕೊಳ್ಳುವವರಿಗೆ ಭಯದ ವಾತಾವರಣ ಶುರುವಾಗಿದೆ. ಕೆಲವೊಂದು ರೈಲುಗಳು ಬೆಳಗ್ಗೆ, ಮಧ್ಯರಾತ್ರಿ ಆಗಮಿಸಲಿದ್ದು, ರೈಲುಗಳನ್ನು ಸರಿಯಾದ ಸಮಯಕ್ಕೆ ಹೋಗಿ ಹತ್ತಿಕೊಳಳುವುದು ಹೇಗೆ? ಎಂದು ಚಿಂತಾಕ್ರಾಂತರಾಗಿದ್ದಾರೆ. ಇನ್ನು ಒಬ್ಬಂಟಿ ಮಹಿಳೆಯರಿಗೆ ರೈಲ್ವೆ ನಿಲ್ದಾಣ ಮತ್ತು ರೈಲು ಪ್ರಯಾಣ ಎಷ್ಟು ಸುರಕ್ಷಿತ ಎಂಬ ಅನುಮಾನ ಮೂಡಿದೆ.
The cleaning staff at Bengaluru's Yeshwantpur railway station found a decomposed body inside a box on Wednesday, which was kept on platform no. 1 of the station. A team of forensic experts team has reached the railway station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm