ಬ್ರೇಕಿಂಗ್ ನ್ಯೂಸ್
04-01-23 06:47 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಡ್ರಮ್ ಪರಿಶೀಲನೆ ಮಾಡಿದಾಗ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ.
ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಸೀಲ್ ಮಾಡಿಟ್ಟಿದ್ದರು. ಇಂದು ವಾಸನೆ ಬಂದಾಗ ನೋಡಿಕೊಂಡಿರುವ ರೈಲ್ವೇ ಪೊಲೀಸರು ತೆಗೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಸದ್ಯ ಯುವತಿಯ ಗುರುತು ಪತ್ತೆ ಹಚ್ಚುತ್ತಿರುವ ಯಶವಂತಪುರ ರೈಲ್ವೇ ಪೊಲೀಸರು, ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕುತ್ತಿಗೆಗೆ ಬಟ್ಟೆಯಿಂದ ಬಿಗಿಯಲಾಗಿದೆ: ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಜಯಮ್ಮ ಪ್ಲಾಸ್ಟಿಕ್ ಡ್ರಮ್ ನಲ್ಲಿ ಶವದ ವಾಸನೆ ಬರುತ್ತಿದ್ದನ್ನ ಕಂಡು ಎಂಬಾಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಡ್ರಮ್ ಪರಿಶೀಲನೆ ನಡೆಸಿದಾಗ ಶವ ಪತ್ತೆಯಾಗಿದೆ. ಶವದ ಕುತ್ತಿಗೆಯಲ್ಲಿ ಬಿಳಿ ಬಣ್ಣದ ದುಪ್ಪಟ್ಟದಿಂದ ಗಂಟು ಬಿಗಿದಿರುವುದು ಪತ್ತೆಯಾಗಿದೆ. ಸುಮಾರು 23 ವರ್ಷ ವಯಸ್ಸಿನ ಮಹಿಳೆ ಮೃತದೇಹ ಎಂದು ಅಂದಾಜಿಸಲಾಗಿದೆ. ಇನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಪಡಿಸಲು ಡ್ರಮ್ ನಲ್ಲಿ ಶವ ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಶವ ಕೊಳೆಯುವಂತೆ ಕೆಮಿಕಲ್ ಡ್ರಮ್ ನಲ್ಲಿ ದುಷ್ಕರ್ಮಿಗಳು ಹಾಕಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆತಂಕಗೊಂಡ ಪ್ರಯಾಣಿಕರು: ಇನ್ನು ರೈಲ್ವೆ ನಿಲ್ದಾಣದಲ್ಲಿ ಯುವತಿ ಶವ ಪತ್ತೆಯಾಗುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದಾರೆ. ದಿನದ ೨೪ ಗಂಟೆ ವೇಳೆಯೂ ರೈಲಿಗಾಗಿ ನಿಲ್ದಾಣದಲ್ಲಿ ಕಾಯುತ್ತಾ ಕುಳಿತುಕೊಳ್ಳುವವರಿಗೆ ಭಯದ ವಾತಾವರಣ ಶುರುವಾಗಿದೆ. ಕೆಲವೊಂದು ರೈಲುಗಳು ಬೆಳಗ್ಗೆ, ಮಧ್ಯರಾತ್ರಿ ಆಗಮಿಸಲಿದ್ದು, ರೈಲುಗಳನ್ನು ಸರಿಯಾದ ಸಮಯಕ್ಕೆ ಹೋಗಿ ಹತ್ತಿಕೊಳಳುವುದು ಹೇಗೆ? ಎಂದು ಚಿಂತಾಕ್ರಾಂತರಾಗಿದ್ದಾರೆ. ಇನ್ನು ಒಬ್ಬಂಟಿ ಮಹಿಳೆಯರಿಗೆ ರೈಲ್ವೆ ನಿಲ್ದಾಣ ಮತ್ತು ರೈಲು ಪ್ರಯಾಣ ಎಷ್ಟು ಸುರಕ್ಷಿತ ಎಂಬ ಅನುಮಾನ ಮೂಡಿದೆ.
The cleaning staff at Bengaluru's Yeshwantpur railway station found a decomposed body inside a box on Wednesday, which was kept on platform no. 1 of the station. A team of forensic experts team has reached the railway station.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm