ಬ್ರೇಕಿಂಗ್ ನ್ಯೂಸ್
04-01-23 10:53 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ರೌಡಿ ಶೀಟರ್ ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ನೆಟ್ಟಗಾಗಿದ್ದಾರೆ. 2018ರಲ್ಲಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಇದೇ ವ್ಯಕ್ತಿ ಸಹಾಯ ಮಾಡಿದ್ದಾನೆ. ಈತನಿಗೂ ಬಿಜೆಪಿ ಸರ್ಕಾರದ ಹಲವು ಪ್ರಭಾವಿ ಸಚಿವರಿಗೆ ಹತ್ತಿರದ ನಂಟು ಇದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
2018ರಲ್ಲಿ ಸಮ್ಮಿಶ್ರ ಸರ್ಕಾರವವನ್ನು ಉರುಳಿಸಲು ಯಾರನ್ನೆಲ್ಲ ಬಳಕೆ ಮಾಡಿಕೊಳ್ಳಲಾಯಿತು..? ಬಾಂಬೆಗೆ ಹೋದವರ ಮೋಜು ಮಸ್ತಿಗೆ ಸಕಲ ವ್ಯವಸ್ಥೆ ಮಾಡಿದವರು ಯಾರು..? ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಸ್ಯಾಂಟ್ರೋ ರವಿ ಮೇಲೆ ಕೇಸುಗಳು ಎಷ್ಟಿವೆ..? ಸ್ಯಾಂಟ್ರೋ ರವಿಗೆ ಐದು ಹೆಸರುಗಳಿವೆ. 1995 ರಿಂದಲೂ ಈತನ ಮೇಲೆ ಕೇಸುಗಳಿವೆ. ಮೈಸೂರು, ಬೆಂಗಳೂರುನಲ್ಲಿ ಎಷ್ಟೋ ಕೇಸ್ ಇವೆ..? ಕಳೆದ ತಿಂಗಳವರೆಗೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಇವನಿಗೆ ಕೊಠಡಿ ಕೊಟ್ಟವರು ಯಾರು? ಕೊಠಡಿ ಕೊಡುವಂತೆ ಯಾರು ಶಿಫಾರಸು ಮಾಡಿದ್ದರು? ಇದೆಲ್ಲವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕುಮಾರಕೃಪಾದಲ್ಲಿ ಕುಳಿತು ಈತ ಭಾರೀ ವ್ಯವಹಾರ ನಡೆಸಿದ್ದಾನೆ. ಇವನ ಹಿಂದೆ ಅಡಗಿ ಕೂತಿರುವ ಅಸಲಿ ವ್ಯಕ್ತಿ ಯಾರು? ಪೊಲೀಸ್ ಅಧಿಕಾರಿಗೆ ಇವನು ಮೊಬೈಲ್ ಕರೆ ಮಾಡಿ, ನಾಳೆ ಬಂದು ನೋಡು ಅಂತ ಹೇಳುತ್ತಾನೆ. ತನ್ನ ಸರ್ ಎಂದು ಕರೆಯುವಂತೆ ಆ ಪೊಲೀಸ್ ಅಧಿಕಾರಿಗೆ ತಾಕೀತು ಮಾಡುತ್ತಾನೆ. ಇದೆಲ್ಲಾ ದಾಖಲೆ ಇದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
17 ಜನ ಮಂತ್ರಿಗಳು ತಮ್ಮ ವಿರುದ್ಧ ಸುದ್ದಿವಾಹಿನಿಗಳಲ್ಲಿ ಕೆಲ ವಿಷಯಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ನಿಂದ ತಡೆಯಾಜ್ಞೆ ತಂದರಲ್ಲ, ಬಾಂಬೆಗೆ ಇಲ್ಲಿಂದ ಶಾಸಕರನ್ನು ಮೋಜು ಮಾಡಲು ಕರೆದುಕೊಂಡು ಹೋದರಲ್ಲ, ಈ ಡೋಂಗಿ ಬಿಜೆಪಿ ಎಲ್ಲರಿಗೂ, ಗೌರವ ಕೊಡುವ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರಲ್ಲ, ಹಾಗಾದರೆ, ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ಕೆಲವರನ್ನು ಕರೆದುಕೊಂಡು ಹೋದರಲ್ಲ, ಆ ವ್ಯಕ್ತಿ ಯಾರು..? ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಾರೆ, ಈ ವಿಷಯದಲ್ಲಿ ಅವರು ದಮ್ಮು ತಾಕತ್ತು ತೋರಿಸಲಿ. ಸ್ಯಾಂಟ್ರೋ ರವಿ ಮತ್ತು ತಮ್ಮ ಸಂಪುಟದ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ಸವಾಲು ಹಾಕಿದ್ದಾರೆ.
ಕೇಸರಿ ಶಾಲು ಹಾಕಿ ಪಕ್ಷಕ್ಕೆ ಸೇರಿಸಿಕೊಂಡವರಿಗೆ ನಾಚಿಕೆ ಆಗಬೇಕು !
ದಲಿತ ಕುಟುಂಬದ ಹೆಣ್ಣು ಮಗಳು ಇವನ ಮೇಲೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಇಂಥವನ ಹೆಗಲ ಮೇಲೆ ಕೇಸರಿ ಟವೆಲ್ ಹಾಕಿ ಪಕ್ಷಕ್ಕೆ ಸೇರಿಸಿಕೊಂಡ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು. ನಮ್ಮ ಮೇಲೆ ಟ್ರೋಲ್ ಮಾಡುವ ಬಿಜೆಪಿ ಸೋಷಿಯಲ್ ಮೀಡಿಯಾವರು, ದಮ್ಮು, ತಾಕತ್ತು ಇದ್ದರೆ ಈ ವಿಷಯವನ್ನು ಟ್ರೋಲ್ ಮಾಡಲಿ ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಲಿಂಬಾವಳಿ ಹೆಸರು ಬರೆದು ಸಾವನ್ನಪ್ಪಿದ ಘಟನೆ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ, ಅರವಿಂದ ಲಿಂಬಾವಳಿ ಹಾಗೂ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲ್ಪಟ್ಟಿರುವ ಗೋಪಿಗೆ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ. 'ನನಗಿರುವ ಮಾಹಿತಿ ಪ್ರಕಾರ ಗೋಪಿ ಮುಖಾಂತರ 50 ರಿಂದ 60 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಮುಖ್ಯವಾಗಿ ಬಿಲ್ಡರುಗಳಿಂದ ಹಣ ಕೀಳಲಾಗಿದೆ. ಈ ಕಾರಣಕ್ಕೆ ಲಿಂಬಾವಳಿ ಸಚಿವ ಸ್ಥಾನ ಕಳೆದುಕೊಂಡರಾ..? ಈ ಬಗ್ಗೆ ಜನರಿಗೆ ಗೊತ್ತಾಗಬೇಕು. ಬಿಲ್ದರುಗಳನ್ನು ದರ್ಜೇವಾರು ವಿಭಜಿಸಿ ಹಣ ವಸೂಲಿ ಮಾಡುತ್ತಿದ್ದರಲ್ಲ, ಆ ಹಣವನ್ನು ಸಂಗ್ರಹ ಮಾಡಿದವರು ಯಾರು..? ಯಾವ ಅಪಾರ್ಟ್ ಮೆಂಟ್ ನಲ್ಲಿ ಈ ವ್ಯವಹಾರ ನಡೆಯಿತು ಎನ್ನುವುದು ಜನಕ್ಕೆ ಗೊತ್ತಾಗಬೇಕಿದೆ' ಎಂದು ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ
What is the relationship between Santro Ravi, against whom the Mysore police has registered an FIR, and some influential ministers of the state BJP government? Former Chief Minister HD Kumaraswamy has demanded that a high-level investigation should be conducted in this regard.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm