ನಾವು ಕಾನೂನು ಚೌಕಟ್ಟಿನಲ್ಲಿ ನೋಡುತ್ತೇವೆ ; ಯತ್ನಾಳ್ ಮೀಸಲು ಗಡುವಿನ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

06-01-23 04:28 pm       Bangalore Correspondent   ಕರ್ನಾಟಕ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ 24 ಗಂಟೆಗಳ ಗಡುವಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು, ಜ.6 : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ 24 ಗಂಟೆಗಳ ಗಡುವಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ‌ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರ ಜತೆ ಮಾತನಾಡಿದರು. ಮೀಸಲಾತಿ ವಿಷಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಕಾನೂನು ಚೌಕಟ್ಟಿನಲ್ಲಿ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಲಾಗಿದೆ. ಮುಂದೆ ಬರುವ ಅಂತಿಮ ವರದಿಯಲ್ಲಿ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವಂತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. 

ಆರ್ಥಿಕ ಹಿಂದುಳಿದ ವರ್ಗದಿಂದ (ಇಡಬ್ಲ್ಯೂಎಸ್) ತೆಗೆದು ಬೇರೆಯವರಿಗೆ ಮೀಸಲಾತಿ ಕೊಟ್ಟರೆ ಬ್ರಾಹ್ಮಣರಿಗೆ ತೊಂದರೆಯಾಗುತ್ತದೆ ಎಂಬುದಾಗಿ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾರನಹಳ್ಳಿ ಅಶೋಕ್ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.

Community leaders including MLA Basanagowda Patil Yatnal, Panchamasali Peethadhi of Koodalasangam Basava Jayamruthyunjaya Swamiji, former MLA Vijayananda Kashappanavar have expressed their displeasure regarding the 2D category reservation issue of Panchamasali community. Addressing the Panchmasali State Executive meeting held in the city on Thursday, the leaders gave Chief Minister Basavaraja Bommai a 24-hour deadline to take an important decision.