ಬ್ರೇಕಿಂಗ್ ನ್ಯೂಸ್
07-01-23 12:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.7: ನ್ಯೂಯಾರ್ಕ್ನಿಂದ ದೆಹಲಿಗೆ ನವೆಂಬರ್ 26ರಂದು ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ 72 ವರ್ಷದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಮುಂಬಯಿ ಮೂಲದ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹಾಗೇ, ಆತನನ್ನು ದೆಹಲಿಗರೆ ಕರೆದೊಯ್ಯುತ್ತಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಂತೆ ಶಂಕರ್ ಮಿಶ್ರಾ ತನ್ನ ಮೊಬೈಲ್ನ್ನೆಲ್ಲ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿಗೆ ಆಗಮಿಸಿದ್ದ. ಇಲ್ಲಿನ ಸಂಜಯ್ನಗರದಲ್ಲಿರುವ ಒಂದು ಗೆಸ್ಟ್ಹೌಸ್ನಲ್ಲಿ ಒಬ್ಬನೇ ತಂಗಿದ್ದ. ಇಂದು ಮಧ್ಯಾಹ್ನದ ಹೊತ್ತಿಗೆ ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
![]()
ನವೆಂಬರ್ 26ರಂದು ಈ ವ್ಯಕ್ತಿ ಕುಡಿದು ಅಮಲೇರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ. ಆದರೆ ಇತ್ತೀಚೆಗೆ ಮಹಿಳೆ ಏರ್ ಇಂಡಿಯಾ ಅಧ್ಯಕ್ಷನಿಗೆ ಪತ್ರದ ಮೂಲಕ ದೂರು ಸಲ್ಲಿಸಿದಾಗಲೇ ವಿಷಯ ಬೆಳಕಿಗೆ ಬಂದಿತ್ತು. 'ಏರ್ ಇಂಡಿಯಾ ಸಿಬ್ಬಂದಿ ಈ ಸಂದರ್ಭವನ್ನು ಸರಿಯಾಗಿ ನಿಭಾಯಿಸಲಿಲ್ಲ. ಸೀಟು ಬದಲಿಸಿಕೊಡಲು ಪೈಲೆಟ್ ಒಪ್ಪಲಿಲ್ಲ. ನಾನು ಆ ವ್ಯಕ್ತಿಯನ್ನು ನೋಡಲು ಇಷ್ಟಪಡುವುದಿಲ್ಲ ಎಂದು ಹೇಳಿದರೂ, ಬಲವಂತವಾಗಿ ನನ್ನೆದುರು ಕರೆತಂದು ನಿಲ್ಲಿಸಿ, ಕ್ಷಮೆ ಕೇಳಿಸಿದರು' ಎಂಬಿತ್ಯಾದಿ ವಿಷಯವನ್ನೂ ಆ 72 ವರ್ಷದ ಮಹಿಳೆ ಹೇಳಿಕೊಂಡಿದ್ದರು.
ಘಟನೆ ನಡೆದ ಏರ್ ಇಂಡಿಯಾ ವಿಮಾನದ ಪೈಲೆಟ್, ಸಹ ಪೈಲೆಟ್ಗೂ ಪೊಲೀಸರು ಸಮನ್ಸ್ ನೀಡಿ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅವರು ಪೊಲೀಸರ ಎದುರು ಬಂದಿರಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದೂ ಹೇಳಲಾಗಿದೆ.
Delhi Police has arrested from Bengaluru the man who allegedly urinated on a woman co-passenger on an Air India flight, officials said on Saturday. The accused, Shankar Mishra, allegedly urinated on the woman, a senior citizen, in an inebriated condition in the business class of the Air India flight from New York to Delhi on November 26 last year.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm