ಬ್ರೇಕಿಂಗ್ ನ್ಯೂಸ್
10-01-23 04:09 pm HK News Desk ಕರ್ನಾಟಕ
ಶಿವಮೊಗ್ಗ, ಜ.10: ಸಾಗರ ಪಟ್ಟಣದ ಭಜರಂಗದಳದ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮೀರ್ (ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದ A1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಮಾಹಿತಿ ನೀಡಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್ ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್ ಗೆ ಸುನೀಲ್ ಕೇಳಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸಿರುವುದು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದ ಹಾಗಾಗಿ ಕುಪಿತಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
ಹಾಗೂ ಸಮೀರನು ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ.ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನ ಸ್ನೇಹಿತರಾದ ಇಮಿಯಾನ್ ಮತ್ತು ಮನ್ಸೂರ್ ನ್ನು ವಶಕ್ಕೆ ಪಡೆಯಲಾಗಿದ್ದು,ಈ ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದು ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿಯಲಿದೆ ಎಂದು ತಿಳಿಸಿದರು.
Sagar attack on Bajrang dal activist, three arrested, accused sister ragged reason for attack. Bajrang Dal workers staged a flash protest in front of Sagar town police station on Monday after one of its workers escaped unhurt when a person tried to attack him with a sharp weapon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm