ಬ್ರೇಕಿಂಗ್ ನ್ಯೂಸ್
11-01-23 12:19 pm HK News Desk ಕರ್ನಾಟಕ
ಬೆಳಗಾವಿ, ಜ.11: ಸ್ಯಾಂಟ್ರೋ ರವಿ ಮತ್ತು ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಳಗಾವಿಯಲ್ಲಿ ವ್ಯಂಗ್ಯವಾಡಿದ್ದಾರೆ.
ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರಾ, ಮೂಗುತಿ ಹಾಕಿದಾಗ ಇನ್ನೊಂಥರಾ ಹೇಗೆ ಕಾಣ್ತಾರೋ ಹಾಗೆ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದು ಡಿ.ಕೆ.
ಶಿವಕುಮಾರ್ ಅವರು ಕ್ರಿಮಿನಲ್ಗಳನ್ನು ಹೆಣ್ಣು ಮಕ್ಕಳ ಸೌಂದರ್ಯಕ್ಕೆ ಹೋಲಿಸಿದರು.

ʻʻಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು ಇವರೆಲ್ಲʼʼ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ನ ಬಹು ನಿರೀಕ್ಷೆಯ ಬಸ್ ಯಾತ್ರೆಯ ಆರಂಭಕ್ಕಾಗಿ ಬೆಳಗಾವಿಗೆ ಬಂದಿರುವ ಅವರು, ʻʻಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಅವರ ಮುಂದೆ ಹೋಗುತ್ತಿದ್ದೇವೆʼʼ ಎಂದರು.

ʻʻಮಹಾತ್ಮಾ ಗಾಂಧೀಜಿಯವರು 1924ರಲ್ಲಿ ಇದೇ ಜಾಗದಲ್ಲಿ ಸ್ವಾತಂತ್ರ್ಯ ಹೋರಾಟದ ಮಹಾ ಅಧಿವೇಶನ ನಡೆಸಿದ್ದರು. ಅದೇ ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆʼʼ ಎಂದ ಅವರು, ʻʻಸರ್ಕಾರದ ಕೊಲೆ, ಕಾಯಿಲೆ, ಭ್ರಷ್ಟಾಚಾರ ತೊಳೆಯುತ್ತೇವೆʼʼ ಎಂದರು.
ʻʻಬಿಜೆಪಿಗೆ ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ನಡೆಸಲು ಮಾಡಲು ಸಾಕಷ್ಟು ಅವಕಾಶಗಳಿದ್ದವು. ಬಂಡವಾಳ ಆಕರ್ಷಿಸುವ, ಉದ್ಯೋಗ ಸೃಷ್ಟಿಸುವ ಅವಕಾಶಗಳು ಇದ್ದವು. ಆದರೆ ಮೂರುವರೆ ವರ್ಷದಿಂದ ಈ ಸರ್ಕಾರ ಜನರ ಶಾಪಕ್ಕೆ ಒಳಗಾಗಿದೆ. ರಾಜ್ಯಕ್ಕೆ ಅಂಟಿರುವ ಶಾಪ ನಿರ್ಮೂಲನೆ ಮಾಡಲು ಪವಿತ್ರ ಭೂಮಿಯಿಂದ ಯಾತ್ರೆ ಆರಂಭಿಸುತ್ತಿದ್ದೇವೆʼʼ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ʻʻಕರ್ನಾಟದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ. ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಒಳ್ಳೆಯ ಆಡಳಿತ ನೀಡುವ ಭರವಸೆ ನೀಡುತ್ತೇವೆʼʼ ಎಂದ ಡಿ.ಕೆ. ಶಿವಕುಮಾರ್, ʻʻಈ ತಿಂಗಳು ರಾಜ್ಯರ ಹಲವೆಡೆ ಮೊದಲ ಹಂತದ ಯಾತ್ರೆ ನಡೆಯಲಿದೆ. ನಮ್ಮ ಯಾತ್ರೆ ಬಗ್ಗೆ ಬಿಜೆಪಿ ಏನೇ ಟೀಕೆ ಮಾಡಲಿ. ಅವರು ಟೀಕೆ ಮಾಡಬೇಕು, ನಮಗೂ ಅನುಕೂಲʼʼ ಎಂದರು.
ಬಿಜೆಪಿ ತಾನು ಮಾಡಿದ ಪಾಪದ ಕೆಲಸಗಳಿಗೆ ಈ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಪಾಪದ ಪುರಾಣದ ಪಟ್ಟಿ ನಮ್ಮ ಬಳಿ ಇದೆ, ಅದನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದರು ಡಿ.ಕೆ.ಶಿವಕುಮಾರ್.
Santro ravi and cycle ravi are precious gems of BJP party slams D K Shivakumar in Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm