ಬ್ರೇಕಿಂಗ್ ನ್ಯೂಸ್
11-01-23 12:19 pm HK News Desk ಕರ್ನಾಟಕ
ಬೆಳಗಾವಿ, ಜ.11: ಸ್ಯಾಂಟ್ರೋ ರವಿ ಮತ್ತು ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಳಗಾವಿಯಲ್ಲಿ ವ್ಯಂಗ್ಯವಾಡಿದ್ದಾರೆ.
ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರಾ, ಮೂಗುತಿ ಹಾಕಿದಾಗ ಇನ್ನೊಂಥರಾ ಹೇಗೆ ಕಾಣ್ತಾರೋ ಹಾಗೆ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎಂದು ಡಿ.ಕೆ.
ಶಿವಕುಮಾರ್ ಅವರು ಕ್ರಿಮಿನಲ್ಗಳನ್ನು ಹೆಣ್ಣು ಮಕ್ಕಳ ಸೌಂದರ್ಯಕ್ಕೆ ಹೋಲಿಸಿದರು.

ʻʻಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು ಇವರೆಲ್ಲʼʼ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ನ ಬಹು ನಿರೀಕ್ಷೆಯ ಬಸ್ ಯಾತ್ರೆಯ ಆರಂಭಕ್ಕಾಗಿ ಬೆಳಗಾವಿಗೆ ಬಂದಿರುವ ಅವರು, ʻʻಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಅವರ ಮುಂದೆ ಹೋಗುತ್ತಿದ್ದೇವೆʼʼ ಎಂದರು.

ʻʻಮಹಾತ್ಮಾ ಗಾಂಧೀಜಿಯವರು 1924ರಲ್ಲಿ ಇದೇ ಜಾಗದಲ್ಲಿ ಸ್ವಾತಂತ್ರ್ಯ ಹೋರಾಟದ ಮಹಾ ಅಧಿವೇಶನ ನಡೆಸಿದ್ದರು. ಅದೇ ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆʼʼ ಎಂದ ಅವರು, ʻʻಸರ್ಕಾರದ ಕೊಲೆ, ಕಾಯಿಲೆ, ಭ್ರಷ್ಟಾಚಾರ ತೊಳೆಯುತ್ತೇವೆʼʼ ಎಂದರು.
ʻʻಬಿಜೆಪಿಗೆ ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ನಡೆಸಲು ಮಾಡಲು ಸಾಕಷ್ಟು ಅವಕಾಶಗಳಿದ್ದವು. ಬಂಡವಾಳ ಆಕರ್ಷಿಸುವ, ಉದ್ಯೋಗ ಸೃಷ್ಟಿಸುವ ಅವಕಾಶಗಳು ಇದ್ದವು. ಆದರೆ ಮೂರುವರೆ ವರ್ಷದಿಂದ ಈ ಸರ್ಕಾರ ಜನರ ಶಾಪಕ್ಕೆ ಒಳಗಾಗಿದೆ. ರಾಜ್ಯಕ್ಕೆ ಅಂಟಿರುವ ಶಾಪ ನಿರ್ಮೂಲನೆ ಮಾಡಲು ಪವಿತ್ರ ಭೂಮಿಯಿಂದ ಯಾತ್ರೆ ಆರಂಭಿಸುತ್ತಿದ್ದೇವೆʼʼ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ʻʻಕರ್ನಾಟದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ. ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಒಳ್ಳೆಯ ಆಡಳಿತ ನೀಡುವ ಭರವಸೆ ನೀಡುತ್ತೇವೆʼʼ ಎಂದ ಡಿ.ಕೆ. ಶಿವಕುಮಾರ್, ʻʻಈ ತಿಂಗಳು ರಾಜ್ಯರ ಹಲವೆಡೆ ಮೊದಲ ಹಂತದ ಯಾತ್ರೆ ನಡೆಯಲಿದೆ. ನಮ್ಮ ಯಾತ್ರೆ ಬಗ್ಗೆ ಬಿಜೆಪಿ ಏನೇ ಟೀಕೆ ಮಾಡಲಿ. ಅವರು ಟೀಕೆ ಮಾಡಬೇಕು, ನಮಗೂ ಅನುಕೂಲʼʼ ಎಂದರು.
ಬಿಜೆಪಿ ತಾನು ಮಾಡಿದ ಪಾಪದ ಕೆಲಸಗಳಿಗೆ ಈ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಪಾಪದ ಪುರಾಣದ ಪಟ್ಟಿ ನಮ್ಮ ಬಳಿ ಇದೆ, ಅದನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದರು ಡಿ.ಕೆ.ಶಿವಕುಮಾರ್.
Santro ravi and cycle ravi are precious gems of BJP party slams D K Shivakumar in Belagavi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm