ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.
ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
26-04-24 08:09 am
Mangalore Correspondent
Mangalore Naxals, Election: ದಕ್ಷಿಣ ಕನ್ನಡ ಜಿಲ್...
25-04-24 10:01 pm
Mangalore Loksabha elections: ದಕ್ಷಿಣ ಕನ್ನಡ ಲೋ...
25-04-24 09:50 pm
Blood donation, KMC manipal: ಲೋಕಸಭಾ ಚುನಾವಣೆಯ...
25-04-24 08:45 pm
Banta Brigade, Mangalore, Brijesh Chowta: ಬಂಟ...
25-04-24 02:42 pm
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm