ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.

ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm