ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.

ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm