ಬ್ರೇಕಿಂಗ್ ನ್ಯೂಸ್
11-01-23 07:10 pm HK News Desk ಕರ್ನಾಟಕ
ದಾವಣಗೆರೆ, ಜ.11 : ರಾಜ್ಯ ಸರಕಾರದ 40 ಶೇಕಡಾ ಕಮಿಷನ್ ದಂಧೆಗೆ ತಾಯಿ, ಮಗ ಬಲಿಯಾಗಿದ್ದಾರೆಂದು ಸಂಬಂಧಿಕರು ದೂರಿದ್ದಾರೆ. ಬೆಂಗಳೂರಿನ ಮೆಟ್ರೋ ಕಾಮಗಾರಿಯ ವೇಳೆ ಪಿಲ್ಲರ್ ಕುಸಿದು ತಾಯಿ, ಮಗು ಬಲಿ ಆಗಿದ್ದರು. ಸಾವನ್ನಪ್ಪಿದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಶವವನ್ನು ದಾವಣಗೆರೆ ತರುತ್ತಿದ್ದಂತೆ ಆಕ್ರೋಶ ಮುಗಿಲು ಮುಟ್ಟಿತ್ತು.
ಮೆಟ್ರೋ ಕಾಮಗಾರಿಗೆ ಹಲವಾರು ಜನ ಬಲಿಯಾಗಿದ್ದಾರೆ. ತಮ್ಮ ಮಗಳು ಹಾಗೂ ಮೊಮ್ಮಗ ಬಲಿ ಆಗಿದ್ದು ಕಮಿಷನ್ ದಂಧೆಗೆ. ಗುತ್ತಿಗೆದಾರರ ಬಳಿ ಕಮಿಷನ್ ಪಡೆದು ಕಾಮಗಾರಿ ಮಾಡಿಸುತ್ತಾರೆ. ಇದೇ ಕಾರಣಕ್ಕೆ ಕಳಪೆ ಕಾಮಗಾರಿ ನಡೆಯುತ್ತದೆ ಎಂದು ಮೃತ ತೇಜಸ್ವಿನಿ ದೊಡ್ಡಪ್ಪ ರಾಘವೇಂದ್ರ ರಾವ್ ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರದ ಪರಿಹಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಯಾರಿಗೆ ಬೇಕು ಇವರ 20 ಲಕ್ಷ ರೂಪಾಯಿ ಪರಿಹಾರ. ಪರಿಹಾರ ಘೋಷಣೆ ಮಾಡಿದವರನ್ನ ಜೈಲಿಗೆ ಹಾಕಬೇಕು ಎಂದು ಹೇಳಿದರು. ಸಾವಿರಾರು ಜನರು, ಕುಟುಂಬಸ್ಥರ ಶೋಕ, ಆಕ್ರೋಶದ ನಡುವೆ ತಾಯಿ ಮತ್ತು ಮಗುವಿನ ಮೃತದೇಹವನ್ನು ಪ್ರತ್ಯೇಕವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.
ಮೂವರು ಇಂಜಿನಿಯರ್ ಅಮಾನತು
ಇದೇ ವೇಳೆ, ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್ಗಳನ್ನು ಅಮಾನತುಗೊಳಿಸಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿದೆ. ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಮೆಟ್ರೋ ಡೆಪ್ಯುಟಿ ಚೀಫ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್, ಸೆಕ್ಷನ್ ಎಂಜಿನಿಯರ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಂ ಫರ್ವೇಜ್ ತಿಳಿಸಿದ್ದಾರೆ.
ಇದೇ ವೇಳೆ, ಬೆಂಗಳೂರು ಮೆಟ್ರೋ ಕಾಮಗಾರಿ ದುರಂತ ಪ್ರಕರಣವು ಕೇಂದ್ರದ ಅಂಗಳ ತಲುಪಿದೆ. ಪ್ರಕರಣ ಸಂಬಂಧ ವರದಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ವರದಿ ಕೇಳಿದೆ. ಘಟನೆ ಹಿನ್ನೆಲೆಯಲ್ಲಿ ಎಂಟು ಮಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
A woman and her two-and-a-half-year-old son died when a structure at a Namma Metro construction site fell on them at Nagawara on January 10, Tuesday, morning. According to the police, the two victims were on a two-wheeler with the father and the other child, who escaped with injuries. Around 10.45 a.m., a Namma Metro structure collapsed and hit a bike on which Lohith, his wife Tejaswini, and their twins (a son and a daughter) were travelling. “Tejaswini and son Vihan were seriously injured and shifted to a private hospital.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm